ಬೆಳ್ತಂಗಡಿ ಬಿಜೆಪಿಯ ಪ್ರಭಾರಿಯಾಗಿದ್ದ ಪುತ್ತೂರಿನ ಯತೀಶ್ ಆರ‍್ವಾರ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ

0

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಪ್ರಭಾರಿಯಾಗಿ ಕಾರ್ಯ ನಿರ್ವಹಿಸಿದ್ದ ಪುತ್ತೂರಿನ ಯತೀಶ್ ಆರ‍್ವಾರ ಅವರನ್ನು ದ.ಕ.ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.

ಮೂಲತಃ ಬೆಳ್ಳಾರೆ ಸಮೀಪದ ಕೊಡಿಯಾಲ ಗ್ರಾಮದ ರ‍್ವಾರ ನಿವಾಸಿಯಾಗಿರುವ ಯತೀಶ್ ಅವರು ಬಿ.ಎ. ಎಲ್‌ಎಲ್‌ಬಿ ಪದವೀಧರರಾಗಿದ್ದಾರೆ.ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ನ ಪೂರ್ಣಾವಧಿ ಕಾರ್ಯಕರ್ತರಾಗಿ 2004ರಿಂದ 2009ರವರೆಗೆ ಕಾರ್ಯ ನಿರ್ವಹಿಸಿದ್ದ ಇವರು ಎಬಿವಿಪಿ ಚಿತ್ರದುರ್ಗ ನಗರ ಸಂಘಟನಾ ಕಾರ್ಯದರ್ಶಿಯಾಗಿ 2004ರಿಂದ 2006ರವರೆಗೆ, ಚಿತ್ರದುರ್ಗ ಜಿಲ್ಲಾ ಸಂಘಟನಾ ಕಾರ್ಯದರ್ಶಿಯಾಗಿ 2006ರಿಂದ 2009ರವರೆಗೆ ಮತ್ತು ದಾವಣಗೆರೆ ಹಾಗೂ ಚಿತ್ರದುರ್ಗ ಜಿಲ್ಲೆಯ ಸಂಘಟನಾ ಕಾರ್ಯದರ್ಶಿಯಾಗಿ 2008-09ರವರೆಗೆ ಕಾರ್ಯ ನಿರ್ವಹಿಸಿದ್ದರು.ಬಳಿಕ 2012ರಿಂದ 2019ರವರೆಗೆ ಭಾರತೀಯ ಜನತಾ ಪಾರ್ಟಿಯ ಪೂರ್ಣಾವಧಿ ಕಾರ್ಯಕರ್ತರಾಗಿ ಜವಾಬ್ದಾರಿ ನಿರ್ವಹಿಸಿದ್ದ ಯತೀಶ್ ರ‍್ವಾರ ಅವರು 2012-13ರಲ್ಲಿ ರಾಜ್ಯ ಬಿಜೆಪಿ ಕಛೇರಿಯಲ್ಲಿ ಕಾರ್ಯ ನಿರ್ವಹಿಸಿದ್ದರು. ರಾಮನಗರ ಮತ್ತು ಕೋಲಾರ ಜಿಲ್ಲಾ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ 2013ರಿಂದ 2016ರವರೆಗೆ ಕಾರ್ಯ ನಿರ್ವಹಿಸಿದ್ದ ಇವರು ಮಂಗಳೂರು ವಿಭಾಗ ಬಿಜೆಪಿಯ ಸಹ ಸಂಘಟನಾ ಪ್ರಧಾನ ಕಾರ್ಯದರ್ಶಿಯಾಗಿ 2016ರಿಂದ 2019ರವರೆಗೆ ಜವಾಬ್ದಾರಿ ನಿರ್ವಹಿಸಿದ್ದರು.ಕೊಡಿಯಾಲ ಹಿ.ಪ್ರಾ.ಶಾಲೆ, ಚೊಕ್ಕಾಡಿ ಕುಕ್ಕಿನಡ್ಕ ಪ್ರೌಢಶಾಲೆ, ಬೆಳ್ಳಾರೆ ಪದವಿಪೂರ್ವ ಕಾಲೇಜು ಮತ್ತು ಪೆರುವಾಜೆಯಲ್ಲಿರುವ ಶಿವರಾಮ ಕಾರಂತ ಸರಕಾರಿ ಪದವಿ ಕಾಲೇಜ್‌ನಲ್ಲಿ ವಿದ್ಯಾಭ್ಯಾಸ ಪೂರೈಸಿದ್ದ ಇವರು ನಂತರ ಚಿತ್ರದುರ್ಗದ ಎಸ್‌ಜೆಎಂ ಕಾನೂನು ಕಾಲೇಜ್‌ನಲ್ಲಿ ಎಲ್‌ಎಲ್‌ಬಿ ಪದವಿ ಪಡೆದಿದ್ದರು.

ಪ್ರಸ್ತುತ ಇವರು ಪುತ್ತೂರಿನ ಆರಾಧ್ಯ ಲೇಔಟ್ ನಿವಾಸಿಯಾಗಿದ್ದಾರೆ.

LEAVE A REPLY

Please enter your comment!
Please enter your name here