Site icon Suddi Belthangady

ಬೆಳ್ತಂಗಡಿ ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ ನಿತೀಶ್.ಎಚ್, ಕೋಶಾಧಿಕಾರಿಯಾಗಿ ಪ್ರಶಾಂತ್, ಕಾರ್ಯದರ್ಶಿಯಾಗಿ ಸಂತೋಷ ಉಪ್ಪಾರು

ಬೆಳ್ತಂಗಡಿ: ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದ ನೂತನ ನಿರ್ದೇಶಕರುಗಳ ಸಭೆ ಫೆ.3 ರಂದು ನೂತನ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು ಇವರ ಅಧ್ಯಕ್ಷತೆಯಲ್ಲಿ ಸಂಘದ ಸಭಾಂಗಣದಲ್ಲಿ ಜರಗಿತು.

ಪ್ರಧಾನ ಕಾರ್ಯದರ್ಶಿಯಾಗಿ ಯುವ ಬಿಲ್ಲವ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ನಿತೀಶ್ ಎಚ್.ಕೋಟ್ಯಾನ್ ಆಯ್ಕೆಯಾದರು.ಕೋಶಾಧಿಕಾರಿಯಾಗಿ ಪ್ರಶಾಂತ್ ಕೊಕ್ರಾಡಿ, ಕಾರ್ಯದರ್ಶಿಯಾಗಿ ಸಂತೋಷ ಉಪ್ಪಾರು ಆಯ್ಕೆಯಾದರು. ನಿರ್ದೇಶಕರುಗಳು ಹಾಜರಿದ್ದರು

Exit mobile version