ಮಂಜೊಟ್ಟಿ ಸಮೀಪ ದ್ವಿಚಕ್ರ ವಾಹನ-ಬಸ್‌ ನಡುವೆ ಡಿಕ್ಕಿ

0

ಬೆಳ್ತಂಗಡಿ: ದ್ವಿಚಕ್ರ ವಾಹನ ಮತ್ತು ಬಸ್‌ ನಡುವೆ ಡಿಕ್ಕಿ ಹೊಡೆದ ಪರಿಣಾಮ ಸವಾರ ಗಾಯಗೊಂಡ ಘಟನೆ ಮಂಜೊಟ್ಟಿ ಸಮೀಪ ನಡೆದಿದೆ.

ಮಂಜೊಟ್ಟಿ ಸಮೀಪದ ಪರಾರಿ ನಿವಾಸಿ ಧರಣೇಂದ್ರ (24) ಎಂಬವರು ಬೆಳ್ತಂಗಡಿ ಕಡೆಯಿಂದ ತನ್ನ ಮನೆ ಮಂಜೊಟ್ಟಿ ಕಡೆಗೆ ದ್ವಿಚಕ್ರ ವಾಹನದಲ್ಲಿ ಹೋಗುತಿದ್ದ ವೇಳೆ ಬೆಳ್ತಂಗಡಿ ಕಡೆಗೆ ಬರುತಿದ್ದ ಬಸ್ ನಡುವೆ ಡಿಕ್ಕಿ ಹೊಡೆದಿದೆ.

ತಕ್ಷಣ ಸ್ಥಳೀಯರು ಉಜಿರೆ ಖಾಸಗಿ ಆಸ್ಪತ್ರೆಗೆ ತೆರಳಿ ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕೊಂಡು ಹೋಗಲಾಗಿದೆ.

LEAVE A REPLY

Please enter your comment!
Please enter your name here