ಮುಂಡಾಜೆ: ಬಂಟರ ಗ್ರಾಮ ಸಮಿತಿ ಮಾಸಿಕ ಸಭೆ- ಸಹಾಯ ಧನ ವಿತರಣೆ

0

ಮುಂಡಾಜೆ: ಗ್ರಾಮ ಸಮಿತಿಯ ಫೆಬ್ರವರಿ ತಿಂಗಳ ಮಾಸಿಕ ಸಭೆಯು ವಿನಾಯಕ ಶೆಟ್ಟಿ ಅಗರಿ ಇವರ ಮನೆಯಲ್ಲಿ ಫೆ.4ರಂದು ನಡೆಯಿತು. ಕಾರ್ಯಕ್ರಮದಲ್ಲಿ ವಿಶೇಷವಾಗಿ ಗ್ರಾಮ ಸಮಿತಿಯ ಮಕ್ಕಳಿಗಾಗಿ ಬಂಟ ಸಂಸ್ಕೃತಿ, ಸಂಸ್ಕಾರಗಳ ಬಗ್ಗೆ ಅರಿವು ಮೂಡಿ ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಅಧ್ಯಕ್ಷತೆ ವಹಿಸಿಕೊಂಡ ಬಂಟರ ಗ್ರಾಮ ಸಮಿತಿಯ ಅಧ್ಯಕ್ಷರಾಗಿರುವ ಪುರುಷೋತ್ತಮ ಶೆಟ್ಟಿ ಅಗರಿ ಇವರು ನೆರವೇರಿಸಿ ಕೊಟ್ಟರು ಅನಾರೋಗ್ಯದಿಂದ ಬಳಲುತ್ತಿರುವ ಅಶೋಕ್ ಕುಮಾರ್ ರೈ ಇವರಿಗೆ ಗ್ರಾಮ ಸಮಿತಿಯ ಸದಸ್ಯರಿಂದ ಒಟ್ಟು ಮಾಡಿ ರೂ 15,000 ಸಹಾಯ ಧನ ವಿತರಿಸಲಾಯಿತು.

ಸಂಘದ ಗೌರವಾಧ್ಯಕ್ಷರಾದ ರಾಮಣ್ಣ ಶೆಟ್ಟಿ ಅಗರಿ ತಮ್ಮ ಅನುಭವಗಳನ್ನು ಹಂಚಿಕೊಂಡರು.ವೇದಿಕೆಯಲ್ಲಿ ವಿಶ್ವನಾಥ ಶೆಟ್ಟಿ ಮುಂಡ್ರುಪಾಡಿ, ವಿನಾಯಕ ಶೆಟ್ಟಿ ಅಗರಿ, ಕಾರ್ಯದರ್ಶಿ ವಿಜಯಕುಮಾರ್ ರೈ ಮತ್ತು ಹಿರಿಯ ಮಾತೆಯಂದಿರು ಉಪಸ್ಥಿತರಿದ್ದರು.ಕಾರ್ಯದರ್ಶಿ ವಿಜಯಕುಮಾರ್ ರೈ ಇವರು ವಂದಿಸಿದರು.ಗ್ರಾಮ ಸಮಿತಿಯ ಎಲ್ಲಾ ಬಂಟ ಬಂಧುಗಳು ಸಹಕರಿಸಿದರು.

LEAVE A REPLY

Please enter your comment!
Please enter your name here