Site icon Suddi Belthangady

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂನ ಗ್ರ್ಯಾಂಡ್ ಫಿನಾಲೆ-ವಿಶ್ವಾಸಾರ್ಹ ಸೇವೆಯೇ ಸಂಸ್ಥೆಯ ಪ್ರಗತಿಯ ಗುಟ್ಟು- ಜನಾರ್ದನ ಗೌಡ- 11ಗ್ರಾಂ ಚಿನ್ನ ಬಂಪರ್ ಬಹುಮಾನ, 4 ನೇ ಸೀಝನ್ ಯೋಜನೆಯ ಕರಪತ್ರ ಬಿಡುಗಡೆ

ಗುರುವಾಯನಕೆರೆ : ಕಳೆದ 16 ವರ್ಷಗಳ ಹಿಂದೆ ಆರಂಭವಾಗಿರುವ ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್ ಮತ್ತು ಫರ್ನಿಚರ್ಸ್ ಸಂಸ್ಥೆಯು ನಗುಮೊಗದ ಸೇವೆ, ವಿಶ್ವಾಸಾರ್ಹ ಉದ್ಯಮ ನಡೆಸುವ ಮೂಲಕ ಬೆಳವಣಿಗೆಯ ಹಾದಿ ಹಿಡಿದಿದೆ.ಇಲ್ಲಿ ಕನಿಷ್ಟ ದರಕ್ಕೆ ನಮ್ಮ ತೃಪ್ತಿಯ ಸಾಧನಗಳು ಲಭಿಸುತ್ತದೆ. ಸಂಸ್ಥೆ ಕಟ್ಟಿ ಇಂದು 30 ಮಂದಿಗೆ ಉದ್ಯೋಗದಾತರಾಗಿಯೂ ಬೆಳೆದಿರುವುದು ಸಂತಸದಾಯಕ ಎಂದು ಕಳಿಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಜನಾರ್ದನ ಗೌಡ ಹೇಳಿದರು.

ಗುರುವಾಯನಕೆರೆ ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ ಮಳಿಗೆಯ ಮೂರನೇ ಲಕ್ಕಿ ಸ್ಕೀಂ ನ ಗ್ರ್ಯಾಂಡ್ ಫಿನಾಲೆ, ಮತ್ತು 4 ನೇ ಸೀಝನ್‌ನ ಪೋಸ್ಟರ್ ಬಿಡುಗಡೆ ಸಮಾರಂಭದಲ್ಲಿ ಅವರು ವಿಜೇತರಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿದ್ದ ಕುವೆಟ್ಟು ಸರಕಾರಿ ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ, ಖ್ಯಾತ ಛಾಯಾಗ್ರಾಹಕ ಪಾಲಾಕ್ಷ ಸುವರ್ಣ, ಎಸ್.ಎಂ.ಎಸ್ ಶಾಮಿಯಾನದ ಮಾಲಿಕ ಅಬ್ದುಲ್ ಲೆತೀಫ್ ಹಾಜಿ ಮಾತನಾಡಿ, ಸಂಸ್ಥೆಯ ಸೇವೆಗಳ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿ ಶುಭ ಕೋರಿದರು. ಕಟ್ಟಡದ ಮಾಲಿಕ ಫೆಲಿಕ್ಸ್ ಡಿಸೋಜಾ, ಕುವೆಟ್ಟು ಗ್ರಾ.ಪಂ ಸದಸ್ಯ ಮುಸ್ತಫಾ, ಉಪಸ್ಥಿತರಿದ್ದರು.

ಅಧ್ಯಕ್ಷತೆಯನ್ನು ಸುಪ್ರಿಂ ಸಮೂಹ ಸಂಸ್ಥೆಗಳ ಮಾಲಕ ಎಮ್ ಅಬ್ದುಲ್ಲ ವಹಿಸಿದ್ದರು.ಪತ್ರಕರ್ತ ಅಶ್ರಫ್ ಆಲಿಕುಂಞಿ ಮುಂಡಾಜೆ ಕಾರ್ಯಕ್ರಮ ಸಂಯೋಜಿಸಿದರು.ಮಳಿಗೆಯ ಮಾಲಿಕ ಝಬೈರ್ ಸ್ವಾಗತಿಸಿ, ಪ್ರಸ್ತಾವನೆಗೈದರು.

ಲಕ್ಕಿ ಡ್ರಾದಲ್ಲಿ ಅಬ್ದುಲ್ ಅಝೀಜ್ ಕಿಲ್ಲೂರು ಅವರು ಗ್ರ್ಯಾಂಡ್ ಫಿನಾಲೆಯಲ್ಲಿ 11 ಗ್ರಾಂ ಚಿನ್ನ ಗೆದ್ದುಕೊಂಡರು. ಉಳಿದ 10 ಮಂದಿ 198—ಅಬ್ಬಾಸ್, 549–ಅರುಣ್ ಸುನ್ನತ್ ಕೆರೆ, 227-ಶೇಖರ್ ಶೆಟ್ಟಿ ಉಪ್ಪಡ್ಕ, 307-ಶಾಹುಲ್ ಹಮೀದ್ ವೇಣೂರು,195-ಜಾಬಿರ್ ಕುಪ್ಪೆಟ್ಟಿ, 384-ಪ್ರೀತಿ ವಾಣಿ ಸ್ಕೂಲ್ ಬೆಳ್ತಂಗಡಿ, 78-ಸ್ವಫಾ, 446-ಸುಹಾಸಿನಿ ಮದ್ದಡ್ಕ, 521-ಸಫ್ರೀನಾ ಮತ್ತು 472-ಅಹಮದ್‌ಕುಂಞಿ ಇವರುಗಳು ಆಕರ್ಷಕ ಬಹುಮಾನ ತಮ್ಮದಾಗಿಸಿಕೊಂಡರು.ಸ್ಥಳದಲ್ಲೇ ಆರಿಸಿಬಂದ ಅದೃಷ್ಟವಂತ ಗ್ರಾಹಕರಾಗಿ ಅಬೀಕ್ಷಾ ಮೂಡಿ ಬಂದು ಚಿನ್ನದ ಉಂಗುರ ಬಹುಮಾನ ಪಡೆದರು.

ನಾನು ಮೈಸೂರಿನಲ್ಲಿ ಸೋಫಾ ತರಬೇತಿಗೆ ಹೋಗಿದ್ದಾಗ ಅಲ್ಲಿ ಸುಪ್ರಿಂ ಎನ್ನುವ ಮಳಿಗೆಯಲ್ಲಿ ವ್ಯವಹಾರ ಆಗುತ್ತಿರುವುದನ್ನು ಗಮನಿಸಿ ನನ್ನ ಊರಿನಲ್ಲೂ ಇಂತಹದ್ದೇ ಉದ್ಯಮ ಯಾಕೆ ಆರಂಭಿಸಬಾರದು ಎಂದು ಸಂಕಲ್ಪ ತೊಟ್ಟು ಇಲ್ಲಿ ಸಂಸ್ಥೆ ಪ್ರಾರಂಭಿಸಿದೆ. ತಂದೆಯವರಾದ ಎಂ. ಅಬ್ದುಲ್ಲ ಅವರು ಆರಂಭಿಕವಾಗಿ ನೀಡಿದ 50 ಸಾವಿರ ರೂ. ನಲ್ಲಿ ಆರಂಭ ಮಾಡಿ, ನನ್ನ ಆರು ಮಂದಿ ಸಹೋದರರ ಸಹಕಾರ, 30 ರಷ್ಟು ಸರ್ವ ಧರ್ಮೀಯ ಸಿಬ್ಬಂದಿಗಳ ತೊಡಗಿಸಿಕೊಳ್ಳುವಿಕೆಯಿಂದ ಈ ಮಟ್ಟಕ್ಕೆ ಬೆಳೆದಿದ್ದೇವೆ. ನಮ್ಮಲ್ಲಿ ಮೋಸ ವಂಚನೆಗೆ ಅವಕಾಶವಿಲ್ಲ. ಪ್ರಾಮಾಣಿಕತೆ ಮತ್ತು ನಿಮ್ಮ ದುಡಿಮೆಯ ಹಣಕ್ಕೆ ನ್ಯಾಯ ಕೊಡುವುದೇ ನಮ್ಮ ವ್ಯವಹಾರ. ಕೈ ಗೆಟಕುವ ದರದಲ್ಲಿ ಜನರ ತೃಪ್ತಿ ಗುರಿಯಾಗಿಸಿಕೊಂಡು ವ್ಯಾಪಾರ ನಡೆಸುತ್ತಿದ್ದೇವೆ. ಸ್ವತಃ ಮಳಿಗೆ ಇಟ್ಟು ಉಳಿತಾಯ ಸ್ಕೀಂ ಮಾಡಿ ಜನರಿಗೆ ಅವರ ಆಯ್ಕೆಯ ವಸ್ತು ನೀಡುತ್ತಾ ಬರುತ್ತಿದ್ದೇವೆ ಎಂದು ಸುಪ್ರಿಂ ಮಳಿಗೆಯ ಮಾಲಕ ಝುಬೈರ್ ತಿಳಿಸಿದರು.

Exit mobile version