ಅಂಡಿಂಜೆಯಲ್ಲಿ ಸಂವಿಧಾನ ಜಾಗೃತಿ ಜಾಥಾ

0

ಅಂಡಿಂಜೆ: ದ.ಕ ಜಿಲ್ಲಾ ಪಂಚಾಯತ್, ಕಂದಾಯ ಇಲಾಖೆ ಬೆಳ್ತಂಗಡಿ, ತಾಲೂಕು ಪಂಚಾಯತ್ ಬೆಳ್ತಂಗಡಿ, ಸಮಾಜ ಕಲ್ಯಾಣ ಇಲಾಖೆ, ಗ್ರಾಮ ಪಂಚಾಯತ್ ಅಂಡಿಂಜೆ ಇವರ ಸಂಯುಕ್ತ ಆಶ್ರಯದಲ್ಲಿ ಸಂವಿಧಾನ ಜಾಗೃತಿ ಜಾಥಾವು ಬೆಳ್ತಂಗಡಿ ತಾಲೂಕಿನ ಅಂಡಿಂಜೆ ಗ್ರಾಮ ಪಂಚಾಯತ್ ಗೆ ಆಗಮಿಸಿತು.

ಈ ಸಂದರ್ಭದಲ್ಲಿ ಪಂಚಾಯತ್ ಸದಸ್ಯರುಗಳು, ತಾಲೂಕು ಸಮಾಜ ಕಲ್ಯಾಣ ಅಧಿಕಾರಿಗಳು, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರು ಹಾಗೂ ಕಾರ್ಯದರ್ಶಿಯವರು, ಇಂದಿರಾ ವಸತಿ ಶಾಲೆಯ ಪ್ರಾಂಶುಪಾಲರು, ಕೊಕ್ರಾಡಿ ಪ್ರೌಢಶಾಲೆಯ ಮತ್ತು ಅಂಡಿಂಜೆ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯರು ಹಾಗೂ ಶಿಕ್ಷಕ ವೃಂದದವರು ಮತ್ತು ವಿದ್ಯಾರ್ಥಿಗಳು, ಸಂಜೀವಿನಿ ಮಹಿಳಾ ಒಕ್ಕೂಟದ ಸದಸ್ಯರುಗಳು ಮತ್ತು ನರೆಗಾ ತಾಲೂಕು ಐಇಸಿ ಸಂಯೋಜಕರಾದ ವಿನಿಷಾ, ಗ್ರಾಮದ ಗಣ್ಯರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಗ್ರಾಮ ಪಂಚಾಯತ್ ದ್ವಿತೀಯ ದರ್ಜೆ ಲೆಕ್ಕ ಸಹಾಯಕರಾದ ಮಮತಾರವರು ಸ್ವಾಗತಿಸಿ ಸಂವಿಧಾನದ ಪ್ರಸ್ತಾವನೆಯನ್ನು ಬೋಧಿಸಿದರು.ಮಂಗಳೂರಿನ ಕಲಾ ತಂಡದವರು ಜಾಗೃತಿ ಗೀತೆ ಮತ್ತು ನಾಟಕ ಪ್ರದರ್ಶಿಸಿದರು.ಡಾ ಅಂಬೇಡ್ಕರ್ ಪ್ರತಿಮೆಗೆ ಗ್ರಾಮ ಪಂಚಾಯತ್ ಸದಸ್ಯರಾದ ಪರಮೇಶ್ವರರವರು ಪುಷ್ಪಾರ್ಚನೆ ಮಾಡಿ ವಂದಿಸಿದರು.

LEAVE A REPLY

Please enter your comment!
Please enter your name here