Site icon Suddi Belthangady

ಹುಣ್ಸೆಕಟ್ಟೆಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಲದ ರಜತ ಮಹೋತ್ಸವ ಪೂರ್ವಭಾವಿ ಸಭೆ

ಬೆಳ್ತಂಗಡಿ: ಮಾರ್ಚ್ 10ರಂದು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ರಜತ ಮಹೋತ್ಸವದ ಪೂರ್ವಭಾವಿ ಸಭೆ ಬೆಳ್ತಂಗಡಿಯ ಹುಣ್ಸೆಕಟ್ಟೆಯಲ್ಲಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪುರವರ ನೇತೃತ್ವದಲ್ಲಿ ಫೆ.5ರಂದು ನಡೆಯಿತು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ಡಾ। ರಾಜಶೇಖರ್ ಕೋಟ್ಯಾನ್, ಜೊತೆ ಕಾರ್ಯದರ್ಶಿ ಗಣೇಶ್ ಪೂಜಾರಿ, ಗೆಜ್ಜೆಗಿರಿ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೇರಾಜೆ, ಬೆಳ್ತಂಗಡಿ ತಾಲೂಕಿನ ಪ್ರಧಾನ ಸಂಚಾಲಕ ಯೋಗೀಶ್ ಕುಮಾರ್, ಗ್ರಾಮ ಸಮಿತಿಯ ಅಧ್ಯಕ್ಷ ಸೀತಾರಾಮ್ ಪೂಜಾರಿ, ಪ್ರಸಾದ್ ಪೂಜಾರಿ, ಸುರೇಶ್ ಪೂಜಾರಿ, ಮಹಿಳಾ ಘಟಕದ ಅಧ್ಯಕ್ಷೆ ಸುಮತಿ ಪ್ರಮೋದ್, ಮಹಿಳಾ ಘಟಕದ ಸಂಚಾಲಕರಾದ ಶಾಂತ ಬಂಗೇರ, ರಾಜಶ್ರೀ ರಾಮನ್ ಹಾಗೂ ಹುಣ್ಸೆಕಟ್ಟೆ ಗ್ರಾಮದ ಸಮಾಜ ಬಾಂಧವರು ಉಪಸ್ಥಿತರಿದ್ದರು.

ರಜತ ಮಹೋತ್ಸವದ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಪಾಲ್ಗೊಳ್ಳಬೇಕಾಗಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷ ರಾಜಶೇಖರ್ ಕೋಟ್ಯಾನ್ ವಿನಂತಿಸಿದರು.

Exit mobile version