Site icon Suddi Belthangady

ಕಳೆಂಜ ಗ್ರಾಮದ ಕುರುಂಬುಡೇಲಿನ ಯುವತಿ ಆತ್ಮಹತ್ಯೆ

ಕಳೆಂಜ: ಗ್ರಾಮದ ಕಾಯರ್ತಡ್ಕ ಕುರುಂಬುಡೇಲು ನಿವಾಸಿ ಓಣಿಬಾಗಿಲು ವನಿತಾ ಯಾನೆ ರೇವತಿ (30) ಡೆತ್ ನೋಟ್ ಬರೆದು ಮನೆಯ ಪಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಪ್ರಕರಣ ಇಂದು ಮುಂಜಾನೆ ಬೆಳಕಿಗೆ ಬಂದಿದೆ.

ಮಂಗಳೂರು ಖಾಸಗಿ ಸಂಸ್ಥೆಯಲ್ಲಿ ಉದ್ಯೋಗದಲ್ಲಿದ್ದ ಯುವತಿ ಅನಾರೋಗ್ಯದ ಕಾರಣ ಒಂದು ತಿಂಗಳ ಹಿಂದೆ ಮನೆಗೆ ಬಂದಿದ್ದರು.

ಡೆತ್ ನೋಟ್ ನಲ್ಲಿ ನನ್ನ ಸಾವಿಗೆ ನಾನೇ ಕಾರಣ ಎಂದು ಉಲ್ಲೇಖಿಸಿರುವ ಬಗ್ಗೆ ಮಾಹಿತಿ ದೊರೆತಿದ್ದು ಧರ್ಮಸ್ಥಳ ಠಾಣೆಯ ಪೊಲೀಸರು ಆಗಮಿಸಿ, ತನಿಖೆ ನಡೆಸುತ್ತಿದ್ದಾರೆ.

ಮೃತರು ತಂದೆ ಹೊನ್ನಪ್ಪ ಗೌಡ, ತಾಯಿ ವಾರಿಜಾ ಹಾಗೂ ಸಹೋದರರಾದ ಜನಾರ್ದನ ಗೌಡ, ಪದ್ಮನಾಭ ಗೌಡ ಮತ್ತು ಅಪಾರ ಬಂಧು-ಬಳಗವನ್ನು ಅಗಲಿದ್ದಾರೆ.

Exit mobile version