Site icon Suddi Belthangady

ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿ ನಾಮನಿರ್ದೇಶನ ಸದಸ್ಯರ ನೇಮಕ

ಬೆಳ್ತಂಗಡಿ: ಕರ್ನಾಟಕ ಭೂ ಸುಧಾರಣೆ ಕಾಯ್ದೆ 1961ರ ಕಲಂ 48ರ ಉಪ ಕಲಂ (1)ರಿಂದ(3)ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕು ಭೂ ನ್ಯಾಯ ಮಂಡಳಿಗೆ ಶಿರ್ಲಾಲು ಶ್ರೀ ಸತ್ಯಸಾರ ಮುಪ್ಪಣ್ಯ ದೈವಸ್ಥಾನ ನೆಲ್ಲಿಗುಡ್ಡೆ ಶಿರ್ಲಾಲು ಇದರ ಆಡಳಿತ ಸಮಿತಿಯ ಅಧ್ಯಕ್ಷರು, ಜನ ಶಿಕ್ಷಣ ನಿಲಯದ ಮಾಜಿ ಜಿಲ್ಲಾ ಅಧ್ಯಕ್ಷರು ಸಾಮಾಜಿಕ ಕಾರ್ಯಕರ್ತರಾದ ಬಾಬು ಎ ಎರ್ಮೆತ್ತೋಡಿ, ಪುದುವೆಟ್ಟು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರು, ಪುದುವೆಟ್ಟು ಮಿಯಾರು ಹಾಲು ಉತ್ಪಾದಕರ ಸಹಕಾರಿ ಸಂಘದ ನಿರ್ದೇಶಕ ಬೊಮ್ಮಣ್ಣ ಗೌಡ, ಮಾಜಿ ತಾಲೂಕು ಯುವ ಕಾಂಗ್ರೆಸ್ ಅಧ್ಯಕ್ಷರು, ತೋಟತ್ತಾಡಿ ಕಾಂಗ್ರೆಸ್ ಗ್ರಾಮ ಸಮಿತಿಯ ಅಧ್ಯಕ್ಷ ಪ್ರದೀಪ್ ಕೆ.ಸಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಮಾಜಿ ಉಪಾಧ್ಯಕ್ಷರು, ಸಾಮಾಜಿಕ ಜಾಲಾತಾಣದ ಸಂಚಾಲಕರಾಗಿ, ಕಾಂಗ್ರೆಸ್ ಪಧವೀಧರ ಘಟಕದ ಅಧ್ಯಕ್ಷರಾಗಿರುವ ಇಸ್ಮಾಯಿಲ್ ಕೆ ಪೆರಿಂಜೆ ಇವರುಗಳನ್ನು ಅಧಿಕಾರೇತರ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿ ಸರ್ಕಾರ ಆದೇಶಿದೆ.

Exit mobile version