ಅಳದಂಗಡಿ: ಸಂವಿಧಾನ ಜಾಗೃತಿ ಜಾಥಾ

0

ಅಳದಂಗಡಿ: ಫೆ.07ರಂದು ಅಳದಂಗಡಿ ಗ್ರಾಮ ಪಂಚಾಯತ್ ಗೆ ಸಂವಿಧಾನ ಜಾಗೃತಿ ಜಾಥಾ ಆಗಮಿಸಿದ್ದು, ಸದ್ರಿ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸರಸ್ವತಿ, ಸದಸ್ಯರಾದ ರೂಪಶ್ರೀ, ಅಬ್ದುಲ್ ಖಾದರ್, ರವಿಕುಮಾರ್, ಹೈಸ್ಕೂಲ್ ಮಕ್ಕಳು, ಅಧ್ಯಾಪಕರು, ಗ್ರಾಮ ಆಡಳಿತ ಅಧಿಕಾರಿ, ಪಂಚಾಯತ್ ಲೆಕ್ಕ ಸಹಾಯಕರಾದ ಪೂವಪ್ಪ, ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಮಹಿಳೆಯರು, ಗ್ರಾಮಸ್ಥರು ಉಪಸ್ಥಿತರಿದ್ದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪೂರ್ಣಿಮಾ ಸ್ವಾಗತ ಕೋರಿದರು.ಗ್ರಾಮ ಪಂಚಾಯತ್ ಅಧ್ಯಕ್ಷರು ದೀಪ ಬೆಳಗುವ ಮೂಲಕ ಉದ್ಘಾಟನೆ ಮಾಡಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು ಹಾಗೂ ಪಂಚಾಯತ್ ವ್ಯಾಪ್ತಿಯ ಹೈಸ್ಕೂಲ್ ಮಕ್ಕಳಿಗೆ ಸಂವಿಧಾನದ ಬಗ್ಗೆ ವಿವಿಧ ಸ್ಪರ್ಧೆಗಳಿಗೆ ಬಹುಮಾನ ವಿತರಿಸಲಾಯಿತು ಹಾಗೂ ಕಲಾ ತಂಡದವರಿಂದ ಸಂವಿಧಾನ ಜಾಗ್ರತಿಯ ನಾಟಕ ಪ್ರದರ್ಶಿಸಲಾಯಿತು.

LEAVE A REPLY

Please enter your comment!
Please enter your name here