ಗುರುವಾಯನಕೆರೆ ಬಳಿ ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಲಾರಿ

0

ಗುರುವಾಯನಕೆರೆ: ಕೆರೆಯ ಬಳಿ ಲಾರಿಯೊಂದು ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ಫೆ.9ರಂದು ಮುಂಜಾನೆ ನಡೆದಿದೆ.

ಗುರುವಾಯನಕೆರೆ- ಕಾರ್ಕಳ ಹೆದ್ದಾರಿಯ ಕೆರೆಯ ಬಳಿ ಇರುವ ದೊಡ್ಡ ತಿರುವಿನಲ್ಲಿ ರಸ್ತೆ ಬದಿ ಇದ್ದ ವಿದ್ಯುತ್ ಕಂಬಕ್ಕೆ ಲಾರಿ ಡಿಕ್ಕಿ ಹೊಡೆದು ಪರಾರಿಯಾಗಿದೆ.  ವಿದ್ಯುತ್ ಕಂಬ ರಸ್ತೆಗೆ ಮುರಿದು ಬಿದ್ದ
ಪರಿಣಾಮ ಕೆಲವು ತಾಸು ವಾಹನ ಸಂಚಾರಕ್ಕೆತಡೆಯುಂಟಾಯಿತು. ತಕ್ಷಣ ಸ್ಥಳೀಯರು ಮೆಸ್ಕಾಂ ಸಿಬ್ಬಂದಿಗಳಿಗೆ ಮಾಹಿತಿ ನೀಡಿ ಅವರು ಬಂದು ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

ಡಿಕ್ಕಿ ಹೊಡೆದ ಬಳಿಕ  ಚಾಲಕ ಲಾರಿ‌ ಸಹಿತ ಪರಾರಿಯಾಗಿದ್ದಾನೆ. ಒಂದು ವೇಳೆ ಡಿಕ್ಕಿಯ ವೇಳೆ ಬೇರೆ ವಾಹನ ಸಂಚಾರಿಸುತಿದ್ದಲ್ಲಿ ಅಥವಾ ಸಾರ್ವಜನಿಕರು ನಡೆದುಕೊಂಡು ಹೋಗುತಿದ್ದಲ್ಲಿ ದೊಡ್ಡ ಅನಾಹುತ ಸಂಭವಿಸುತಿತ್ತು.

ಅದೃಷ್ಟವಶಾತ್ ವಾಹನ ಹಾಗೂ ಜನ ಸಂಚಾರ ಇಲ್ಲದ ಕಾರಣ ದೊಡ್ಡ ಅಪಾಯ ತಪ್ಪಿದಂತಿದೆ.ವಿದ್ಯುತ್ ಕಂಬ ಹಾಕಲು ಮೆಸ್ಕಾಂ ಸಿಬ್ಬಂದಿಗಳು ಕ್ರಮ ಕೈಗೊಂಡಿದ್ದಾರೆ.ಸುಮಾರು ರೂ 30,000 ನಷ್ಟ ಸಂಭವಿಸಿದ್ದು ಪೊಲೀಸರು  ದೂರು ದಾಖಲಿಸಿದ್ದಾರೆ. 

LEAVE A REPLY

Please enter your comment!
Please enter your name here