ವೇಣೂರಿನಲ್ಲಿ ಗೆಜ್ಜೆಗಿರಿ ಮೇಳದ ಯಕ್ಷಗಾನ ಕಲಾವಿದರಿಗೆ ಸನ್ಮಾನ

0

ವೇಣೂರು: ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ ವೇಣೂರು ವಲಯ, ಯುವವಾಹಿನಿ ವೇಣೂರು ಘಟಕದ ಆಶ್ರಯದಲ್ಲಿ ಶ್ರೀ ಆದಿ ಧೂಮಾವತಿ ಶ್ರೀ ದೇಯಿಬೈದೆತಿ ಕೃಪಾಪೋಷಿತ ಯಕ್ಷಗಾನ ಮಂಡಳಿ ಮೂಲಸ್ಥಾನ ಗೆಜ್ಜೆಗಿರಿ ಮೇಳದವರಿಂದ ನಡೆದ ಯಕ್ಷಗಾನದಲ್ಲಿ ಕಲಾವಿದರಾದ ಸತೀಶ್ ನೈನಾಡು ಹಾಗೂ ಹರೀಶ್ ಕುಲಾಲ್ ರವರನ್ನು ಗೌರವಿಸಿ ಸನ್ಮಾನಿಸಲಾಯಿತು.

ಕಾರ್ಯಕ್ರಮದಲ್ಲಿ ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಅಧ್ಯಕ್ಷ ಜಯವಿಕ್ರಮ್ ಕಲ್ಲಾಪು, ಪ್ರಧಾನ ಕಾರ್ಯದರ್ಶಿ ನಿತೀಶ್ ಎಚ್,ಮಾಜಿ ನಿರ್ದೇಶಕರಾದ ರಮೇಶ್ ಪಡ್ಡಾಯಿಮಜಲು, ತಾಲೂಕು ಯುವ ಬಿಲ್ಲವ ವೇದಿಕೆ ಅಧ್ಯಕ್ಷ ಎಂ.ಕೆ.ಪ್ರಸಾದ್, ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ(ರಿ) ವೇಣೂರು ವಲಯದ ಅಧ್ಯಕ್ಷ ಹರೀಶ್ ಕುಮಾರ್ ಪೊಕ್ಕಿ, ಪ್ರಧಾನ ಕಾರ್ಯದರ್ಶಿ ರಾಕೇಶ್ ಕುಮಾರ್ ಮೂಡುಕೋಡಿ , ಮಾಜಿ ಅಧ್ಯಕ್ಷ ಪೂವಪ್ಪ ಪರನೀರು, ಜಿ. ಪಂ. ಮಾಜಿ ಸದಸ್ಯರ ಧರಣೇಂದ್ರ ಕುಮಾರ್, ಯುವವಾಹಿನಿ ವೇಣೂರು ಘಟಕದ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಬಂಗೇರ ಅಂಡಿಂಜೆ, ಕೇಂದ್ರ ಸಮೀತಿ ಸಂಘಟನಾ ಕಾರ್ಯದರ್ಶಿ ಅರುಣ್ ಕೋಟ್ಯಾನ್, ಮಾಜಿ ಅಧ್ಯಕ್ಷ ನವೀನ್ ಪಚ್ಚೆರಿ,ಮಾಜಿ ಕಾರ್ಯದರ್ಶಿ ಸತೀಶ್ ಪಿ ಎನ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here