ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆ

0

ಬೆಳ್ತಂಗಡಿ: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಮಿಕ ವಿಭಾಗ ಕಾರ್ಮಿಕ ಘಟಕದ ರಾಜ್ಯಾಧ್ಯಕ್ಷರಾದ ಕೆ ಪುಟ್ಟಸ್ವಾಮಿಗೌಡರವರ ನೇತೃತ್ವದಲ್ಲಿ ರಾಜ್ಯ ಕಾರ್ಯಕಾರಿಣಿ ಸಮಿತಿ ಸಭೆಯು ಕಾಂಗ್ರೆಸ್ ಭವನ ರೆಸ್ ಕೋರ್ಸ್ ರಸ್ತೆ ಬೆಂಗಳೂರು ನಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಕೆಪಿಸಿಸಿ ವಕ್ತರೆ ಭವ್ಯ ನರಸಿಂಹಮೂರ್ತಿ ರಾಜ್ಯ ಕಾರ್ಮಿಕ ಘಟಕದ ಪ್ರಧಾನ ಕಾರ್ಯದರ್ಶಿಯಾದ ಅಬ್ದುಲ್ ರೆಹಮಾನ್ ಪಡ್ಪು, ಕಾರ್ಯದರ್ಶಿಗಳಾದ ವಹಾಬ್ ಕುದ್ರೋಳ್ಳಿ ಸಹಬ್ಜಿ ಪುತ್ತೂರು ರಾಜ್ಯ ಕಾರ್ಮಿಕ ಘಟಕದ ಉಪಾಧ್ಯಕ್ಷರುಗಳು ಹಾಗೂ ರಾಜ್ಯ ಪದಾಧಿಕಾರಿಗಳು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರುಗಳು, ರಾಜ್ಯ ಪದಾಧಿಕಾರಿಗಳು ಹಲವು ಸಲಹೆ ಸೂಚನೆಗಳನ್ನು ನೀಡಿ ಮುಂಬರುವ ಲೋಕಸಭಾ ಚುನಾವಣೆಯ ಬಗ್ಗೆ ಚರ್ಚಿಸಲಾಯಿತು.

ಫೆ.17ರಂದು ಮಂಗಳೂರಿನಲ್ಲಿ ನಡೆಯುವ ರಾಜ್ಯಮಟ್ಟದ ಸಮಾವೇಶಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ತೀರ್ಮಾನಿಸಲಾಯಿತು ಹಾಗೂ ರಾಜ್ಯ ಕಾರ್ಮಿಕ ಸಮಾವೇಶವನ್ನು ಮೇ ತಿಂಗಳಲ್ಲಿ ಮಾಡುವುದನ್ನು ತೀರ್ಮಾನಿಸಲಾಯಿತು.

LEAVE A REPLY

Please enter your comment!
Please enter your name here