Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕೊಕ್ಕಡ ವಲಯದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ- ಒಕ್ಕೂಟಗಳ ಪದಗ್ರಹಣ ಸಮಾರಂಭ

ಪಟ್ರಮೆ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ, ಕೊಕ್ಕಡ ವಲಯದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಮತ್ತು ಒಕ್ಕೂಟಗಳ ಪದಗ್ರಹಣ ಸಮಾರಂಭ ಫೆ.11ರಂದು ಪಟ್ರಮೆಯಲ್ಲಿ ನಡೆಯಿತು.

ಸಭೆಯ ಅಧ್ಯಕ್ಷತೆ ನಿತೇಶ್ ಬಲ್ಲಾಳ ಅನುವಂಶಿಕ ಆಡಳಿತ ಮುಖ್ಯಸ್ಥರು ದುರ್ಗಾಪರಮೇಶ್ವರಿ ದೇವಸ್ಥಾನ ಅನಾರು ಇವರು ವಹಿಸಿದ್ದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿ ಯೋಜನೆಯ ಪ್ರತಿಯೊಂದು ಕಾರ್ಯಕ್ರಮಗಳಿಗೂ ತಮ್ಮ ಸಹಕಾರ ಇರುವುದಾಗಿ ತಿಳಿಸಿದರು.

ಮುಖ್ಯ ಅತಿಥಿಯಾಗಿ ಭಾಗವಹಿಸಿದಂತ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಮಾನವ ಸಂಪನ್ಮೂಲ ವಿಭಾಗದ ನಿರ್ದೇಶಕ ಸುರೇಶ್ ಮೋಯ್ಲಿ ಅವರು ಯೋಜನೆಯ ಕಾರ್ಯಕ್ರಮಗಳು ಬಡ್ಡಿದರಗಳು ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಉತ್ತಮವಾದ ಮಾರ್ಗದರ್ಶನವನ್ನು ನೀಡಿದರು.ಕಾರ್ಯಕ್ರಮದ ರಾಮ ಕುಮಾರ ನಿರೂಪಿಸಿ, ವರದಿಯನ್ನು ಕೊರಗಪ್ಪ ಗೌಡ, ಆರತಿ ವಂದಿಸಿದರು.

ಕಾರ್ಯಕ್ರಮದಲ್ಲಿ ಮನೋಜ್ ಗ್ರಾಮಪಂಚಾಯಿತಿ ಅಧ್ಯಕ್ಷರು, ಕುಶಾಲಪ್ಪ ಗೌಡ ಪೂವಜೆ, ಆನಂದ ಗೌಡ, ಬಾಲಕೃಷ್ಣ ಕೆದಿಲಾಯ, ಡಾ ಮೊಹದಾಸ್ ಗೌಡ, ಪ್ರಶಾಂತ್ ಶೆಟ್ಟಿ ದೇರಾಜೆ, ಸೇಸಪ್ಪಮೂಲ್ಯ, ಕುಶಾಲಪ್ಪ ಗೌಡ, ಕೊರಗಪ್ಪ ಗೌಡ, ಸುರೇಶ್ ನಲಿಕೆ, ಉಸ್ಮಾನ್, ವಲಯದ ಸೇವಾಪ್ರತಿನಿಧಿಗಳು ಶೌರ್ಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರು ಉಪಸ್ಥಿತರಿದ್ದರು.

Exit mobile version