Site icon Suddi Belthangady

ನಿರಂಜನ ಬಾವಂತಬೆಟ್ಟು ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

ಧರ್ಮಸ್ಥಳ: ಹಿರಿಯ ಸಹಕಾರಿ ಧುರೀಣ ನಿರಂಜನ ಬಾವಂತಬೆಟ್ಟು ಅವರ ನಿಧನದ ಸುದ್ದಿ ತಿಳಿದು ವಿಷಾದವಾಯಿತು.

ರಾಜಕೀಯ, ಸಾಮಾಜಿಕ, ಧಾರ್ಮಿಕ ಹಾಗೂ ಸಹಕಾರಿ ರಂಗದಲ್ಲಿ ಅವರು ಉತ್ತಮ ಸೇವೆ-ಸಾಧನೆ ಮಾಡಿ ಚಿರಪರಿಚಿತರಾಗಿದ್ದರು.

ವಿಶೇಷವಾಗಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಹಿಂದುಳಿದವರಿಗೆ ಸಹಕಾರಿ ಸಂಘಗಳ ಮೂಲಕ ಅವರು ಉತ್ತಮ ಸೇವೆ ನೀಡಿ ಆರ್ಥಿಕ ಪ್ರಗತಿಗೆ ಪ್ರೋತ್ಸಾಹ ನೀಡುತ್ತಿದ್ದರು. ಅವರು ನಮ್ಮ ಕ್ಷೇತ್ರದ ಅಭಿಮಾನಿಯೂ, ಭಕ್ತರೂ ಆಗಿದ್ದು ಎಲ್ಲಾ ಕಾರ್ಯಕ್ರಮಗಳಿಗೆ ಸಕ್ರಿಯ ಸಹಕಾರ ನೀಡುತ್ತಿದ್ದರು.

ಅವರ ಆತ್ಮಕ್ಕೆ ಚಿರಶಾಂತಿಯನ್ನು ಕೋರುತ್ತೇನೆ ಹಾಗೂ ಅವರ ಅಗಲುವಿಕೆಯಿಂದ ಕುಟುಂಬವರ್ಗದವರಿಗೆ ಉಂಟಾದ ದುಃಖವನ್ನು ಸಹಿಸುವ ಶಕ್ತಿ-ತಾಳ್ಮೆಯನ್ನಿತ್ತು ಶ್ರೀ ಮಂಜುನಾಥ ಸ್ವಾಮಿ ಹರಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಿ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

Exit mobile version