ಸೌತಡ್ಕದಲ್ಲಿ ಕೆಎಂಎಫ್ ನಂದಿನಿ ಮಾರಾಟ ಮಳಿಗೆ ಶುಭಾರಂಭ

0

ಕೊಕ್ಕಡ: ಪ್ರಸಿದ್ಧ ಶ್ರದ್ಧಾ ಕೇಂದ್ರ, ಯಾತ್ರಾ ಸ್ಥಳವಾದ ಸೌತೆಡ್ಕದಲ್ಲಿ ಕೆಎಂಎಫ್ ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆಯು ಶುಭಾರಂಭಗೊಂಡಿತು.

ಬೆಳ್ತಂಗಡಿ ಎಲ್.ಐ.ಸಿ ಅಭಿವೃದ್ಧಿ ಅಧಿಕಾರಿ ಉದಯಶಂಕರ್ ಕೆ ದೀಪ ಬೆಳಗಿಸಿ ಶುಭ ಹಾರೈಸಿದರು.

ಅರಸಿನಮಕ್ಕಿ ಗ್ರಾ.ಪಂ ಉಪಾಧ್ಯಕ್ಷ ಸುಧೀರ್ ಕುಮಾರ್, ಹತ್ಯಡ್ಕ ಸಿಎ ಬ್ಯಾಂಕ್ ನಿರ್ದೇಶಕ ಮುರಳಿ ಶೆಟ್ಟಿಗಾರ್, ಶಿಶಿಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀನ್ ಶಿಶಿಲ, ಅರಸಿನಮಕ್ಕಿ ಬಿಜೆಪಿ ಶಕ್ತಿ ಕೇಂದ್ರದ ಪ್ರಮುಖ್ ಗಣೇಶ್ ಕೆ ಹೊಸ್ತೋಟ, ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಕಾರ್ಯದರ್ಶಿ ಕರುಣಾಕರ ಶಿಶಿಲ, ನಿವೃತ್ತ ಯೋಧ ಸುಭೇದಾರ್ ಮೇಜರ್ ಮಹಾಬಲ, ಗ್ರಾ ಪಂ ಸದಸ್ಯ ಪ್ರೇಮಚಂದ್ರ, ಸುಂದರ ರಾಣ್ಯ, ಕೃಷ್ಣಪ್ಪ ಗೌಡ ಪಡ್ಡಾಯಿಬೆಟ್ಟು ಹಾಗೂ ಮನೆಯವರು, ಹಿತೈಷಿಗಳು ಉಪಸ್ಥಿತರಿದ್ದರು.ಮಳಿಗೆಯ ಮಾಲಕ ಸುದರ್ಶನ ಗೌಡ ಎಲ್ಲರನ್ನು ಸ್ವಾಗತಿಸಿ ಉದ್ಯಮಕ್ಕೆ ಎಲ್ಲರ ಬೆಂಬಲ ಕೋರಿದರು.

ಮಳಿಗೆಯಲ್ಲಿ ಕೆಯಂಯಫ್ ನಂದಿನಿ ಪ್ರಸಿದ್ಧ ಉತ್ಪನ್ನಗಳಾದ ಹಾಲು, ಮೊಸರು, ಮಜ್ಜಿಗೆ, ಲಸ್ಸಿ, ಮೈಸೂರಪಾಕ್, ಐಸ್ ಕ್ರೀಮ್ ಮೊದಲಾದವು ಲಭ್ಯವಿದ್ದು ಶ್ರೀ ಕ್ಷೇತ್ರ ಕ್ಕೆ ಬರುವ ಭಕ್ತಾದಿಗಳ ಮನ ತಣಿಸಲಿವೆ.

LEAVE A REPLY

Please enter your comment!
Please enter your name here