ಧರ್ಮಸ್ಥಳ ಶ್ರೀ ಧ.ಮಂ.ಆಂ.ಮಾ.ಶಾಲೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿ ಹೆತ್ತವರ ಸಮಾಲೋಚನಾ ಸಭೆ

0

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಧರ್ಮಸ್ಥಳದಲ್ಲಿ 10ನೇ ತರಗತಿಯ ವಿದ್ಯಾರ್ಥಿ ಹೆತ್ತವರ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾಗಿರುವ ಸೋಮಶೇಖರ್ ಶೆಟ್ಟಿ ಆಗಮಿಸಿದ್ದರು.ಹೆತ್ತವರ ಕರ್ತವ್ಯ ಹಾಗೂ ಅವರ ಜವಾಬ್ದಾರಿಯನ್ನು ಹಲವಾರು ನೈಜ ಉದಾಹರಣೆಗಳ ಮುಖಾಂತರ ವಿದ್ಯಾರ್ಥಿಗಳ ಹೆತ್ತವರಿಗೆ ಅವರು ತಿಳಿಯ ಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಹತ್ತನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಹಾಗೂ ಅವರ ಮುಂದಿನ ಓದಿನ ತಯಾರಿ ಹೇಗಿರಬೇಕು, ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಹೆತ್ತವರ ಗಮನ ಇತ್ಯಾದಿ ವಿಚಾರಗಳನ್ನು ತಿಳಿಯ ಪಡಿಸಿದರು.ಸಹ ಶಿಕ್ಷಕಿ ಆಶಾ ಕಾರ್ಯಕ್ರಮವನ್ನು ನಡೆಸಿಕೊಟ್ಟ ಕಾರ್ಯಕ್ರಮದಲ್ಲಿ ಪರಿಮಳ ಎಂ.ವಿ ಸ್ವಾಗತಿಸಿ ಕೊನೆಗೆ ಕಾರ್ಯಕ್ರಮದಲ್ಲಿ ವಂದಿಸಿದರು.ಹತ್ತನೇ ತರಗತಿಯ ವಿದ್ಯಾರ್ಥಿ ಹೆತ್ತವರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here