ಮುಂಡಾಜೆ ಸ.ಹಿ.ಪ್ರಾ.ಶಾಲಾ ವಿದ್ಯಾರ್ಥಿನಿ ದ್ವಿಷಾ ಯು.ಡಿ ಗೆ ರಾಜ್ಯ ಪ್ರಶಸ್ತಿ

0

ಮುಂಡಾಜೆ: ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಯಿಂದ ಮಂಗಳೂರಿನ ಪಿಲಿಕುಲದಲ್ಲಿ ನಡೆದ ಬುಲ್ ಬುಲ್‌ ಚತುರ್ಥ ಚರಣ (ಹೀರಕ್‌ಗರಿ) ಪರೀಕ್ಷೆಯಲ್ಲಿ ಸ.ಹಿ.ಪ್ರಾ.ಶಾಲೆ ಮುಂಡಾಜೆಯ 3ನೇ ತರಗತಿ ವಿದ್ಯಾರ್ಥಿನಿ ದ್ವಿಷಾ ಯು.ಡಿ ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಗೊಂಡಿದ್ದಾರೆ.

ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮವನ್ನು ಬೆಂಗಳೂರು ರಾಜಭವನದ ಗಾಜಿನ ಮನೆಯಲ್ಲಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ರವರು ನೆರವೇರಿಸಿದರು.

ವಿದ್ಯಾರ್ಥಿನಿ ದ್ವಿಷಾ ಯು.ಡಿ ಇವರಿಗೆ ಬುಲ್‌ ಬುಲ್‌ ವಿಭಾಗ ಶಿಕ್ಷಕಿ ಸೇವಂತಿ ಬಿ.(Pre. ALT Bulbul) ರವರು ಮಾರ್ಗದರ್ಶನ ನೀಡಿರುತ್ತಾರೆ ಮತ್ತು ಇವರು ಮುಂಡಾಜೆ ಗ್ರಾಮದ ದಿನೇಶ್‌ ಮತ್ತು ಉಷಾರವರ ಮಗಳಾಗಿರುತ್ತಾರೆ.

LEAVE A REPLY

Please enter your comment!
Please enter your name here