ವೇಣೂರು ಬಾಹುಬಲಿ ಮಸ್ತಕಾಭಿಷೇಕ-ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಹೆಗ್ಗಡೆ ಭೇಟಿ-ಕಾಮಗಾರಿ ವೀಕ್ಷಣೆ

0

ವೇಣೂರು: ವೇಣೂರು ಭಗವಾನ್ ಶ್ರೀ ಬಾಹಬಲಿಯ ಮಹಾಮಜ್ಜನಕ್ಕೆ ಕೆಲವೇ ದಿನಗಳು ಬಾಕಿಯಿದ್ದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಭೇಟಿ ನೀಡಿ ಅಟ್ಟಳಿಗೆ ಹಾಗೂ ಇತರ ಕಾಮಗಾರಿಗಳನ್ನು ವೀಕ್ಷಿಸಿದರು.

ಈ ಸಂದರ್ಭದಲ್ಲಿ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ.ಪದ್ಮಪ್ರಸಾದ ಅಜಿಲರು, ಮಹಾ ಮಸ್ತಕಾಭಿಷೇಕ ಸಮಿತಿ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಕುಮಾರ್ ಇಂದ್ರ, ಪ್ರಮುಖರಾದ ಡಾ.ಶಾಂತಿ ಪ್ರಸಾದ್, ವಿಕಾಸ್ ಜೈನ್ ಪಡ್ಯಾರಬೆಟ್ಟು, ಶಿವಪ್ರಸಾದ್ ಅಜಿಲ, ಸನತ್ ಕುಮಾರ್ ಜೈನ್, ಪ್ರಮೋದ್ ಜೈನ್ ಹಾಗೂ ಸಮಿತಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here