ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ.ಶಾಲೆಯಲ್ಲಿ ಪೋಷಕರ ಸಭೆ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಧರ್ಮಸ್ಥಳದಲ್ಲಿ ಪೋಷಕರ ಸಭೆಯು ಶಾಲಾ ಮುಖ್ಯ ಶಿಕ್ಷಕರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯಲ್ಲಿ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಇವರು ಮಕ್ಕಳಿಗೆ ಮನೆಯಿಂದಲೇ ಶಿಕ್ಷಣ ನೀಡಬೇಕು.ಪ್ರತಿ ದಿನ ಶಾಲೆಯಲ್ಲಿ ನಡೆಯುವ ಚಟುವಟಿಕೆಗಳನ್ನು ಮಕ್ಕಳಿಂದ ಕೇಳಿ ತಿಳಿದುಕೊಳ್ಳಬೇಕು.ಮಕ್ಕಳಲ್ಲಿ ಇರುವ ಪ್ರತಿಭೆಯನ್ನು ಗುರುತಿಸಿ ಆ ನಿಟ್ಟಿನಲ್ಲಿ ಅವನಿಗೆ ಪ್ರೋತ್ಸಾಹ ನೀಡಿದಾಗ ಅವನ ಪ್ರಗತಿ ಸಾಧ್ಯ.ಜೀವನ ಮೌಲ್ಯಗಳನ್ನು ಅರಿತು ಸಮಾಜದಲ್ಲಿ ಬದುಕಲು ಮಕ್ಕಳಲ್ಲಿ ಮೌಲ್ಯ ಗಳನ್ನು ಬೆಳೆಸಿಕೊಳ್ಳಲು ನಮ್ಮ ಜೊತೆಗೆ ಪೋಷಕರು ಸಹಕರಿಸಬೇಕಾಗಿದೆ.ಮಕ್ಕಳು ನಮಗೆ ಕನ್ನಡಿ ಇದ್ದ ಹಾಗೆ.ಆದ್ದರಿಂದ ಮಕ್ಕಳನ್ನು ಸರಿಯಾದ ರೀತಿಯಲ್ಲಿ ಗಮನಿಸಿ ಎಂದರು.

ಇದಕ್ಕೆ ಪೂರಕವಾಗಿ ಶ್ರೀ ಧ ಮ ಶಿಕ್ಷಣ ಸಂಸ್ಥೆಗಳಲ್ಲಿ ಉತ್ತಮವಾದ ಶಿಕ್ಷಣದ ಜೊತೆಗೆ ಸಂಸ್ಕಾರಯುತ ಶಿಕ್ಷಣ ದೊರೆಯುತ್ತಿದೆ ಎಂದು ಪೋಷಕರು ತಮ್ಮ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಶ್ರೀಜಾ ಇವರು ಪ್ರಾಸ್ಥಾವಿಕ ನುಡಿಗಳೊಂದಿಗೆ ಸ್ವಾಗತಿಸಿದ ಕಾರ್ಯಕ್ರಮಕ್ಕೆ ಪೂರ್ಣಿಮಾ ಜೋಷಿ ಇವರು ವಂದಾನಾರ್ಪಣೆಗೈದರು.ಎಲ್ಲಾ ಶಿಕ್ಷಕರು ಭಾಗವಹಿಸಿದ್ದರು.ಹೆಚ್ಚಿನ ಸಂಖ್ಯೆಯಲ್ಲಿ ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here