ಇಂದು(ಫೆ.17)ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ನೇತೃತ್ವದಲ್ಲಿ ಬಳಂಜದಲ್ಲಿ ಹೊನಲು ಬೆಳಕಿನ ಮ್ಯಾಟ್ ಕಬಡ್ಡಿ ಪಂದ್ಯಾಟ

0

ಬಳಂಜ: ಜಿಲ್ಲೆಯ ಹೆಸಾರಾಂತ ಕುಣಿತ ಭಜನಾ ಮಂಡಳಿಗಳಲ್ಲಿ ಒಂದಾದ ಬಳಂಜದ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳ ವಿದ್ಯಾನಿಧಿಗಾಗಿ ತಾಲೂಕಿನ ಅಯ್ಧ 10 ತಂಡಗಳ ಮ್ಯಾಟ್ ಕಬಡ್ಡಿ ಪಂದ್ಯಾಟ ಇಂದು ಸಂಜೆ ಶ್ರೀ ನಾರಾಯಣ ಗುರು ಸಭಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆಯಲಿದೆ.

ಮಂಡಳಿಯ ಸಂಚಾಲಕರಾದ ಹರೀಶ್ ವೈ ಚಂದ್ರಮ ಈ ಕುರಿತು ಮಾಹಿತಿಯನ್ನು ನೀಡಿದ್ದು ತಾಲೂಕಿನ ಶಾಸಕ ಹರೀಶ್ ಪೂಂಜ, ಯುವ ನಾಯಕರಾದ ರಕ್ಷಿತ್ ಶಿವರಾಂ ಸೇರಿದಂತೆ ಗಣ್ಯರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ನೃತ್ಯ ವೈಭವ ನಡೆಯಲಿದೆ ಎಂದು ಹರೀಶ್ ವೈ ಚಂದ್ರಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮಂಡಳಿಯು ಹಲವು ಜನಪರ ಸೇವೆಯನ್ನು ನೀಡುತ್ತಿದ್ದು ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಕುಣಿತ ಭಜನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಹೆಸರನ್ನು ಪಡೆದಿದ್ದಾರೆ.

LEAVE A REPLY

Please enter your comment!
Please enter your name here