Site icon Suddi Belthangady

ಇಂದಬೆಟ್ಟು ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯನ್ನು ಫೆ.17ರಂದು ಇಂದಬೆಟ್ಟು ಪಂಚಾಯತ್ ನ ಸಭಾಂಗಣದಲ್ಲಿ ನಡೆಸಲಾಯಿತು.

ಈ ಸಭೆಯು ಒಕ್ಕೂಟದ ಅಧ್ಯಕ್ಷೆ ಹೇಮಲತಾ ಇವರ ಅಧ್ಯಕ್ಷತೆಯಲ್ಲಿ ನಡೆಯಿತು.ಮಹಾಸಭೆಯನ್ನು ಪಾರ್ಥನೆಯೊಂದಿಗೆ ಆರಂಭಿಸಲಾಯಿತು.ಪಂಚಾಯತ್ ಅಧ್ಯಕ್ಷರು, ಒಕ್ಕೂಟದ ಅಧ್ಯಕ್ಷರು, ಪಂ.ಕಾರ್ಯದರ್ಶಿ ದೀಪ ಬೆಳಗಿಸುವುದರ ಮೂಲಕ ಮಹಾಸಭೆಯನ್ನು ಹಾಗೂ ಹಳ್ಳಿ ಸಂತೆ ಕಾರ್ಯಕ್ರಮವನ್ನು ಉದ್ಘಾಟಿಸಿದರು.

ಉದ್ಘಾಟನೆ ಮಾಡಿದ ಪಂಚಾಯತ್ ಅಧ್ಯಕ್ಷರು ಶುಭ ಹಾರೈಸಿದರು.ಬಂದಂತಹ ಎಲ್ಲಾ ಗಣ್ಯರನ್ನು ಹೂಗುಚ್ಚ ನೀಡುವುದರ ಮೂಲಕ ಸ್ವಾಗತಿಸಲಾಯಿತು.ಒಕ್ಕೂಟ ವರದಿಯನ್ನು ಒಕ್ಕೂಟದ ಕಾರ್ಯದರ್ಶಿಯವರು ಮಂಡಿಸಿದರು ಮತ್ತು ಜಮೆ ಮತ್ತು ಖರ್ಚುನ್ನು ಸಭೆಯಲ್ಲಿ ಎಂಬಿಕೆ ವಾಣಿಶ್ರೀ ಇವರು ಮಂಡಿಸಿದರು.

ಈ ಸಂದರ್ಭದಲ್ಲಿ ಒಕ್ಕೂಟ ವತಿಯಿಂದ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕ ನಿತೀಶ್ ಇವರಿಗೆ ಸನ್ಮಾನಿಸಲಾಯಿತು.ನಂತರ ಇವರು ಎನ್.ಆರ್.ಎಲ್.ಎಂ.ನ ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು.

ನಂತರ ತಾಲೂಕು ವಲಯ ಮೇಲ್ವಿಚಾರಕ ಜಯನಂದ ರವರು ಎನ್.ಆರ್.ಎಲ್.ಎಂ. ಯೋಜನೆಯ ಬಗ್ಗೆ ಸಮಗ್ರವಾದ ಮಾಹಿತಿಯನ್ನು ನೀಡಿದರು.

ನಂತರ BRP-EP ಯಾದ ವೀಣಾ ಇವರು ಕೃಷಿಯೇತರ ಚಟುವಟಿಕೆ ಬಗ್ಗೆ ಮಾತನಾಡಿದರು.ಪಂಚಾಯತ್ ಅಧ್ಯಕ್ಷ ಆಶಾಲತಾ ರವರು ಒಕ್ಕೂಟ ಚೆನ್ನಾಗಿ ನಡೆಯುತಿದೆ.ಇನ್ನೂ ಮುಂದೆಯೂ ಒಕ್ಕೂಟ ಚೆನ್ನಾಗಿ ನಡೆಯಲಿ ಎಂದು ಶುಭ ಹಾರೈಸಿದರು.ನಂತರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.

ಒಕ್ಕೂಟದ ನೂತನವಾಗಿ ಆಯ್ಕೆಯಾದ ಅದ್ಯಕ್ಷರು, ಉಪಾಧ್ಯಕ್ಷರು, ಕಾರ್ಯದರ್ಶಿ, ಜತೆ ಕಾರ್ಯದರ್ಶಿ ಕೋಶಾಧಿಕಾರಿ, ಸದಸ್ಯರ ಪದಗ್ರಹಣ ಮಾಡಲಾಯಿತು.ನಂತರ ನೂತನವಾಗಿ ಆಯ್ಕೆಯಾದ ಅಧ್ಯಕ್ಷರಿಗೆ ಹೂಗುಚ್ಛ ನಡವಳಿ ಕೊಡುದರ ಮೂಲಕ ಹಸ್ತಾಂತರ ಮಾಡಲಾಯಿತು.ಹಾಗೂ ನಿರ್ಗಮಿತ ಪದಾಧಿಕಾರಿಗಳಿಗೆ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಲಿಂಗತ್ವಧರಿತ ದೌರ್ಜನ್ಯ ಅಭಿಯಾನದ ಬಗ್ಗೆ ಸದಸ್ಯರಿಗೆ ಅರಿವು ಮೂಡಿಸಲಾಯಿತು.ಸಭೆಯಲ್ಲಿ 150 ಸದಸ್ಯರು ಭಾಗಿಯಾಗಿದ್ದರು.

ಪಂಚಾಯತ್ ಸದಸ್ಯರು, ಆಶಾ, ಅಂಗನವಾಡಿ ಕಾರ್ಯಕರ್ತೆಯರು, MBK, LCRP, ಕೃಷಿ ಸಖಿ ಹಾಗೂ ಪಶುಸಖಿ ಭಾಗವಹಿಸಿದ್ದರು.

ಕಾರ್ಯಕ್ರಮವನ್ನು ಕುಮಾರಿ ವೀಕ್ಷಾದೀಪ ಇವರು ನಿರೂಪಿಸಿದರು.ಶೃತಿ ಎಲ್ಲರನ್ನು ಸ್ವಾಗತಿಸಿದರು.ರೋಹಿಣಿ ಎಲ್ಲರಿಗೂ ಧನ್ಯವಾದವಿತ್ತರು.

Exit mobile version