ಸಾರ್ವಜನಿಕ ಸತ್ಯನಾರಾಯಣ ಪೂಜೆ, ಪದಗ್ರಹಣ

0

ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗುರುವಾಯನಕೆರೆ ವ್ಯಾಪ್ತಿಯ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟ ಎ ಮತ್ತು ಬಿ ಇವರ ಸಂಯುಕ್ತ ಆಶ್ರಯದಲ್ಲಿ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಇವರ ನೇತೃತ್ವದಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ ವಿಶ್ವಕರ್ಮ ಸಭಾಭವನದಲ್ಲಿ ನಡೆಯಿತು.

ಮುಖ್ಯ ಅತಿಥಿಗಳಾಗಿ ಮಂಜಪ್ಪ ಮೂಲ್ಯ ಅತಾಜೆ ನಿವೃತ ವ್ಯವಸ್ಥಾಪಕರು ಪಿಲಾತಬೆಟ್ಟು ಸಹಕಾರಿ ಬ್ಯಾಂಕ್, ರೂಪ ಗಂಗಾಧರ್ ರೂಪಶ್ರೀ ಗಾರ್ಮೆಂಟ್ಸ್ ಬಸವನಗುಡಿ, ಗುರುವಾಯನಕೆರೆ ಯೋಜನಾಧಿಕಾರಿಗಳಾದ ದಯಾನಂದ ಪೂಜಾರಿ, ಜನಜಾಗೃತಿ ಗ್ರಾಮ ಸಮಿತಿ ಅಧ್ಯಕ್ಷ ಆಗಿರುವ ಗಣೇಶ ಆಚಾರ್ಯ, ಗುಣವತಿ ಬಸವನಗುಡಿ ಬಿ ಒಕ್ಕೂಟ ಅಧ್ಯಕ್ಷರು ಹಾಗೂ ಪಿಲಾತಬೆಟ್ಟು ಪಂಚಾಯತ್ ಸದಸ್ಯರು ಪುಷ್ಪ ಮೋಹನ್, ಮಡಂತ್ಯಾರು ಪಂಚಾಯತ್ ಸದಸ್ಯರು ಪಾರ್ವತಿ, ಕವಲಾಮುಡುರು ಪಂಚಾಯತ್ ಸದಸ್ಯರು ಕಲಿಲ್ ಅಹಮ್ಮದ್, ಎ ಒಕ್ಕೂಟದ ನೂತನ ಅಧ್ಯಕ್ಷ ಗೋದಾವರಿ ಹಾಗೂ ಬಿ ಒಕ್ಕೂಟದ ನೂತನ ಅಧ್ಯಕ್ಷ ಚಂದ್ರಶೇಖರ ಹಾಗೂ ಒಕ್ಕೂಟದ ಎಲ್ಲಾ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಯೋಜನಾಧಿಕಾರಿಗಳಾದ ದಯಾನಂದ ಪೂಜಾರಿಯವರು ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ತಿಳಿಸಿದರು.ಖಾವಂದರಿಂದ ಅಣ್ಣ ಜಾಗೃತಿ ಪ್ರಶಸ್ತಿ ಪುರಸ್ಕಾರ ಪಡೆದ ಮಡಂತ್ಯಾರು ವಲಯ ಜನಜಾಗೃತಿ ಅಧ್ಯಕ್ಷ ಪದ್ಮನಾಭ ಸಾಲಿಯಾನ್ ಇವರನ್ನು ಒಕ್ಕೂಟದ ವತಿಯಿಂದ ಎಲ್ಲಾ ಗಣ್ಯರ ಸಮ್ಮುಖದಲ್ಲಿ ಸನ್ಮಾನಿಸಲಾಯಿತು.ಈ ಕಾರ್ಯಕ್ರಮದ ಸ್ವಾಗತವನ್ನು ಕೇಶವತಿ ವಹಿಸಿಕೊಂಡರು.ಒಕ್ಕೂಟದ ವರದಿಯನ್ನು ಸೇವಾಪ್ರತಿನಿಧಿಯಾದ ಭಾರತಿ ಓದಿದರು.ಮಡಂತ್ಯಾರು ವಲಯ ಮೇಲ್ವಿಚಾರಕರು ಆಗಿರುವ ವಸಂತ ಕುಮಾರ್ ಕಾರ್ಯಕ್ರಮ ನಿರೂಪಣೆ ಮಾಡಿದರು.ವೆಂಕಟೇಶ್ ಧನ್ಯವಾದವಿತ್ತರು.

ಈ ಕಾರ್ಯಕ್ರಮ ದಲ್ಲಿ ಒಕ್ಕೂಟದ ಪದಾಧಿಕಾರಿಗಳು, ಸಂಘದ ಸದಸ್ಯರು, ವಲಯದ ಎಲ್ಲಾ ಸೇವಾಪ್ರತಿನಿಧಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here