ಜೈ ಕರ್ನಾಟಕ ಗಾಯಕರ ಬಳಗ ದ.ಕ ಜಿಲ್ಲೆಯ ಸಮಿತಿಯಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ, ತಾಲೂಕು ಪದಾಧಿಕಾರಿಗಳ ಆಯ್ಕೆ

0

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗ ದ.ಕ ಜಿಲ್ಲೆಯ ಸಮಿತಿಯಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಇಂದು(ಫೆ.19) ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ ಜಿಲ್ಲಾಧ್ಯಕ್ಷರಾದ ಇಸ್ಮಾಯಿಲ್ ಬಂಗಾಡಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಭೆಯ ಆರಂಭದಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ ಸ್ವಾಗತ ಮಾಡುವ ಮೂಲಕ ಪ್ರಾರಂಬಿಸಿದರು.ಬಳಿಕ ಮಹಿಳಾ ಘಟಕ ಅಧ್ಯಕ್ಷೆ ಕವಿತಾ ದಿನಕರ್, ಪುತ್ತೂರು ಜಿಲ್ಲಾ ಅಧ್ಯಕ್ಷ ಇಸ್ಮಾಯಿಲ್ ಬಂಗಾಡಿ ಬಳಗದ ಬಗ್ಗೆ ಮಾಹಿತಿ ನೀಡಿದರು.ನಂತರ ಸದಸ್ಯತ್ವ ನೋಂದಾವಣೆ ಮಾಡಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.

ಬೆಳ್ತಂಗಡಿ ತಾಲೂಕಿನ ಅಧ್ಯಕ್ಷರಾಗಿ ಮೋಹನ್ ಬೆಳ್ತಂಗಡಿ, ಗೌರವ ಅದ್ಯಕ್ಷರಾಗಿ ಟೋಮಿ ಥೋಮಸ್ ತೋಟತಾಡಿ, ಮಹಿಳಾ ಘಟಕ ಅಧ್ಯಕ್ಷರಾಗಿ ಗಂಗಾ ಮದು, ಉಪಾಧ್ಯಕ್ಷರಾಗಿ ಜಯಶ್ರೀ ಮತ್ತು ಸುಮಂಗಳ, ಪ್ರದಾನ ಕಾರ್ಯದರ್ಶಿಯಾಗಿ ಗಣೇಶ್ ಬೆಳ್ತಂಗಡಿ, ಜೊತೆ ಕಾರ್ಯದರ್ಶಿಯಾಗಿ ಕುಸುಮ ಬೈಪಾಡಿ, ಸಂಘಟನಾ ಕಾರ್ಯದರ್ಶಿಗಳಾಗಿ ಜಗನ್ನಾಥ್ ಮುಂಡಾಜೆ ಮತ್ತು ಪ್ರಸಾದ್ ಶೆಟ್ಟಿ ಮಾದ್ಯಮ ಸಲಹೆಗಾರರಾಗಿ ರಂಜನ್ ಗೌಡ ಅವರನ್ನು ಆಯ್ಕೆ ಮಾಡಲಾಯಿತು.

ಸಭೆಯಲ್ಲಿ ಜಿಲ್ಲಾ ಪ್ರದಾನ ಕಾರ್ಯದರ್ಶಿ ರವಿ ನೇತ್ರಾವತಿ ನಗರ, ಜಿಲ್ಲಾ ಕೋಶಾಧಿಕಾರಿ ನವೀನ್ ಕುಮಾರ್ ಬಂಗಾಡಿ, ಜಿಲ್ಲಾ ಮಾದ್ಯಮ ಸಲಹೆಗಾರ ಶಾಹೀನ್ ಆತ್ತಾಜೆ ಮತ್ತು ತಾಲೂಕು ಗಾಯಕರು ಉಪಸ್ಥಿತರಿದ್ದರು.ಕಾರ್ಯಕ್ರಮದ ಕೊನೆಯಲ್ಲಿ ಶಾಹೀನ್ ಆತ್ತಾಜೆಯವರ ಧನ್ಯವಾದಗೈದು ಕಾರ್ಯಕ್ರಮವು ಮುಕ್ತಾಯಗೊಂಡಿತು.

LEAVE A REPLY

Please enter your comment!
Please enter your name here