ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಕಾರು

0

ಬೆಳ್ತಂಗಡಿ: ಚಾಲಕನ ನಿಯಂತ್ರಣ ತಪ್ಪಿ ಇಪ್ಪತ್ತು ಅಡಿ ಪ್ರಪಾತಕ್ಕೆ ಕಾರು ಬಿದ್ದ ಘಟನೆ ಚಾರ್ಮಾಡಿ ಘಾಟ್‌ನ ಮಲಯ ಮಾರುತ ಬಳಿ ನಡೆದಿದೆ.

ಚಿತ್ರದುರ್ಗದಿಂದ ಧರ್ಮಸ್ಥಳಕ್ಕೆ ಪ್ರವಾಸಕ್ಕೆ ಬಂದಿದ್ದ ಆರು ಜನರನ್ನು ಒಳಗೊಂಡಿದ್ದ ಕಾರು ಪಲ್ಟಿಯಾಗಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ.ರಾಷ್ಟ್ರೀಯ ಹೆದ್ದಾರಿ ರಸ್ತೆಗೆ ತಡೆಗೋಡೆ ಇಲ್ಲದ ಕಾರಣ ಪ್ರಪಾತಕ್ಕೆ ಕಾರು ಉರುಳಿ ಬೀಳಲು ಕಾರಣವಾಗಿದೆ.ಇಪ್ಪತ್ತು ಅಡಿ ಪ್ರಪಾತಕ್ಕೆ ಬಿದ್ದ ಕಾರಣ ಕಾರು ಜಖಂ ಗೊಂಡಿದೆ.

ಮೂಡಿಗೆರೆ ತಾಲ್ಲೂಕಿನ ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here