Site icon Suddi Belthangady

ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಾಧನೆಗೆ ವಿಮಾ ಕ್ಷೇತ್ರದ ಗೌರವ

ಬೆಳ್ತಂಗಡಿ: ನೆದರ್‌ಲ್ಯಾಂಡನ ಆಮ್‌ಸ್ಟರ್‌ಡ್ಯಾಮ್‌ನಲ್ಲಿ ನಡೆದ ಕೇರ್ ಇನ್ಸೂರೆನ್ಸ್ ಕಂಪೆನಿಯ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ರಿಟೇಲ್ ಬಿಸಿನೆಸ್‌ನಲ್ಲಿ ರಾಷ್ಟ್ರಮಟ್ಟದಲ್ಲಿ ಗುರುತಿಸಿದ ಹಾಗೂ ಆರೋಗ್ಯ ವಿಮಾ ಯೋಜನೆಯ ಗುರಿ ಮೀರಿದ ಸಾಧನೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರಿಗೆ ಕೇರ್ ಇನ್ಸೂರೆನ್ಸ್ ಕಂಪೆನಿಯ ರಾಷ್ಟ್ರೀಯ ಮುಖ್ಯಸ್ಥ ಶರ್ಮಿಲ್ ಮೋದಿರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಕೇರ್ ಇನ್ಸೂರೆನ್ಸ್ ಕಂಪೆನಿಯ ವಲಯ ಮುಖ್ಯಸ್ಥರಾದ ಜಗದೇವ್ ಸಿಂಗ್, ಹರಿಂದಾಮ್ ಸಿನ್ಹ ಮತ್ತಿತ್ತರರು ಉಪಸ್ಥಿತರಿದ್ದರು.

Exit mobile version