Site icon Suddi Belthangady

ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವ: ತೋರಣ ಮೂಹೂರ್ತ, ಹೊರೆಕಾಣಿಕೆ ಸಮರ್ಪಣೆ

ಪಟ್ರಮೆ: ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ಜಾತ್ರೆ ಹಾಗೂ ದೈವಗಳ ನೇಮೋತ್ಸವವು ಫೆ.20ರಂದು ಪ್ರಾರಂಭಗೊಂಡು ಫೆ.23ರವರೆಗೆ ನಡೆಯಲಿದೆ.

ಇಂದು(ಫೆ.20) ಬೆಳಿಗ್ಗೆ ತೋರಣ ಮೂಹೂರ್ತ, ಊರವರಿಂದ ಹೊರೆಕಾಣಿಕೆ, ಉಗ್ರಾಣ ಮೂಹೂರ್ತ ಕಾರ್ಯಕ್ರಮವು ನಡೆಯಿತು.

ಈ ಸಂದರ್ಭದಲ್ಲಿ ಪವಿತ್ರಪಾಣಿ ಪ್ರಶಾಂತ್‌ ಶಬರಾಯ, ಅರ್ಚಕರು ರಾಮಚಂದ್ರ ನೂರಿತ್ತಾಯ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ, ಜಾತ್ರಾ ಸಮಿತಿ ಅಧ್ಯಕ್ಷ ಭಾಸ್ಕರ ಕೊಕ್ಕಡ, ಜಾತ್ರಾ ಸಮಿತಿ ಖಜಾಂಜಿ ಸುದೇಶ್ ಕುಮಾರ್, ಜಾತ್ರಾ ಸಮಿತಿ ಕಾರ್ಯದರ್ಶಿ ಜಯರಾಮ ಮಣಿಯೇರು, ಸದಸ್ಯರು ಹಾಗೂ ಊರವರು ಉಪಸ್ಥಿತರಿದ್ದರು.

ಸಂಜೆ ವಾಸ್ತು ಹೋಮ, ವಾಸ್ತು ಪೂಜೆ, ರಕ್ಷೋಘ್ನ ಹೋಮ, ಸಂಜೆ 6.00ಕ್ಕೆ ಊರ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿದೆ.

Exit mobile version