Site icon Suddi Belthangady

ವೈಷ್ಣವಿ ಸಂಜೀವಿನಿ ಒಕ್ಕೂಟದ ಮಹಾಸಭೆ

ಕಳಿಯ: ಕಳಿಯ ವೈಷ್ಣವಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟ ಒಕ್ಕೂಟದ ವಾರ್ಷಿಕ ಮಹಾಸಭೆ ಫೆ.14ರಂದು ಕಳಿಯ ಪಂಚಾಯತ್ ಸಭಾಭವನದಲ್ಲಿ ಒಕ್ಕೂಟದ ಅಧ್ಯಕ್ಷೆ ವಿಜಯಶ್ರೀ ಅಧ್ಯಕ್ಷತೆಯಲ್ಲಿ ನಡೆಯಿತು.

ಗ್ರಾ.ಪಂ.ಅಧ್ಯಕ್ಷ ದಿವಾಕರ ಮೆದಿನ ಕಾರ್ಯಕ್ರಮ ಉದ್ಘಾಟಿಸಿ ಶುಭ ಹಾರೈಸಿದರು.

ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀ ನಿತೇಶ್ ಇವರಿಗೆ ಸನ್ಮಾನಿಸಲಾಯಿತು. ತಾಲೂಕು ಮೇಲ್ವಿಚಾರಕಿ ವೀಣಾ ರವರು ಎನ್.ಆರ್.ಎಲ್.ಎಂ. ನ ಯೋಜನೆಯ ಮಾಹಿತಿ ನೀಡಿದರು.

ನಂತರ ಪದಾಧಿಕಾರಿಗಳ ಆಯ್ಕೆ ನಡೆಸಲಾಯಿತು.ಬಳಿಕ ಅಧ್ಯಕ್ಷರಿಗೆ ನಡವಳಿ ಕೊಡುದರ ಮೂಲಕ ಹಸ್ತಾಂತರ ಮಾಡಲಾಯಿತು.

ಗ್ರಾ.ಪಂ. ಸದಸ್ಯರು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕತೆಯರು, ಸಖಿಗಳು ಉಪಸ್ಥಿತಿದ್ದರು. ಒಕ್ಕೂಟ ವರದಿ ಮತ್ತು ಖರ್ಚು ವೆಚ್ಚವನ್ನು ಸಭೆಯಲ್ಲಿ ಎಂ.ಬಿ.ಕೆ ಪ್ರಜ್ಞಾ ಮಂಡಿಸಿದರು.

ಪ್ರತಿಭಾ ಸ್ವಾಗತಿಸಿ, ಕುಸುಮ ವಂದಿಸಿದರು.ರುಪಾ ಕಾರ್ಯಕ್ರಮ ನಿರೂಪಿಸಿದರು.

Exit mobile version