Site icon Suddi Belthangady

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನ ಬೆಳ್ತಂಗಡಿ ವರ್ಷಾವಧಿ ಜಾತ್ರಾ ಮಹೋತ್ಸವ: ಮಕ್ಕಿಮನೆ ಕಲಾವೃಂದ ಬಳಗದಿಂದ ಸಾಂಸ್ಕೃತಿಕ ವೈಭವ

ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವದ ಪ್ರಯುಕ್ತ ಫೆ.19ರಂದು ಗಣಹೋಮ, ಶತರುದ್ರಾಭಿಷೇಕ, ಪ್ರಸನ್ನ ಪೂಜೆ, ಪಲ್ಲಕ್ಕಿ ಉತ್ಸವ, ಚಂದ್ರಮಂಡಲೋತ್ಸವ ಇತ್ಯಾದಿ ಧಾರ್ಮಿಕ ವಿಧಿಗಳು ನಡೆಯಿತು.

ಈ ಸಂದರ್ಭದಲ್ಲಿ ಮಕ್ಕಿಮನೆ ಕಲಾವೃಂದ ಮಂಗಳೂರು ಬಳಗದಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದ ಅನುವಂಶೀಯ ಆಡಳಿತ ಮೊಕ್ತೇಸರಾದ ಕೆಲ್ಲಗುತ್ತು ಸಬ್ರಬೈಲು ಜಯವರ್ಮರಾಜ ಬಳ್ಳಾಲ್ ಮತ್ತು ಸಹೋದರ, ಸಹೋದರಿಯರು ಹಾಗೂ ಕುಟುಂಬಸ್ಥರು ಮತ್ತು ಅಪರ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version