Site icon Suddi Belthangady

ಧರ್ಮಸ್ಥಳ ಶ್ರೀ ಧ.ಮಂ.ಆಂ.ಮಾ.ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಾಗಾರಕ್ಕೆ ಮುಖ್ಯ ಅತಿಥಿಗಳಾಗಿ ಉಡುಪಿ ಹಾಗೂ ಮಂಗಳೂರಿನ ಟೈಮ್ ಸಂಸ್ಥೆಯ ನಿರ್ದೇಶಕರಾಗಿರುವ ಗಣೇಶ್ ಹೆಬ್ಬಾರ್ ಆಗಮಿಸಿದ್ದರು.ವಿದ್ಯಾರ್ಥಿಗಳ ಭವಿಷ್ಯಕ್ಕೆ ಯಾವೆಲ್ಲ ಕವಲೊಡೆದ ದಾರಿಗಳಿವೆ ಯಾವ ದಾರಿಯಲ್ಲಿ ಹೋದರೆ ಗೆಲುವು ಸಿಗುತ್ತದೆ.ಯಾವ ಕೋರ್ಸ್ ಉತ್ತಮ ಎಂಬಿತ್ಯಾದಿ ವಿಚಾರಗಳನ್ನು ತಿಳಿಯಪಡಿಸಿದರು.

ಆನ್ಮಿಯ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರಾದ ಕುಮಾರಿ ಜೆನ್ನಿ ಸ್ವಾಗತಿಸಿ, ಕುಮಾರಿ ಅಂಜನಾ ರೋಸ್ ಅತಿಥಿಗಳ ಕಿರುಪರಿಚಯ ನೀಡಿ ಕುಮಾರಿ ಚಿನ್ಮಯ್ ರೈ ಧನ್ಯವಾದವಿತ್ತರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ ಮಾರ್ಗದರ್ಶನದಲ್ಲಿ ಮೂಡಿಬಂದ ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿ ಹೆತ್ತವರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

Exit mobile version