ಪಟ್ರಮೆ ಶ್ರೀ ವಿಷ್ಣುಮೂರ್ತಿ ದೇವಳದಲ್ಲಿಂದು ವಾರ್ಷಿಕ ಜಾತ್ರಾ ಮಹೋತ್ಸವ

0

ಪಟ್ರಮೆ ಗ್ರಾಮದ ಶ್ರೀ ವಿಷ್ಣುಮೂರ್ತಿ ದೇವರ ವಾರ್ಷಿಕ ಜಾತ್ರಾ ಮಹೋತ್ಸವ ಇಂದು (ಫೆ.22) ನಡೆಯಲಿದೆ.

ಬೆಳಿಗ್ಗೆ ಗಣಹೋಮ, ಉತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಮಂತ್ರಾಕ್ಷತೆ ನಂತರ ಅನ್ನಸಂತರ್ಪಣೆ ನೆರವೇರಲಿದೆ.

ರಾತ್ರಿ ಗಂಟೆ 7.30ರಿಂದ ಧಾರ್ಮಿಕ ಸಭಾ ಕಾರ್ಯಕ್ರಮ ನಡೆಯಲಿದ್ದು.‌ದೇವಸ್ಥಾನದ ಆಡಳಿತ ಮೊಕ್ತೇಸರ ಹಾಗೂ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಶ್ರೀಧರ ಶಬರಾಯ ಅಧ್ಯಕ್ಷತೆ ವಹಿಸಲಿದ್ದಾರೆ.

ಮುಖ್ಯ ಅತಿಥಿಯಾಗಿ ವಸರಿಕಟ್ಟೆ ಸೇವಾ ಸಮಿತಿಯ ಅಧ್ಯಕ್ಷ ಕೊರಗಪ್ಪ ಶೆಟ್ಟಿ ಮುಂಡ್ರೇಲು, ಧಾರ್ಮಿಕ ಉಪನ್ಯಾಸವನ್ನು ನಿಡ್ಲೆಯ ಡಾ| ಪ್ರಜ್ವಲ್ ಕಜೆ ಹಾಗೂ ಗೌರವ ಉಪಸ್ಥಿತರಾಗಿ ಪಟ್ರಮೆ ಗ್ರಾ.ಪಂ. ಅಧ್ಯಕ್ಷ ಮನೋಜ್, ಸದಸ್ಯ ರಾಜೇಶ್ ರೈ, ದೇವಳದ ಪವಿತ್ರ ಪಾಣಿ ಪ್ರಶಾಂತ ಶಬರಾಯ, ಜಾತ್ರಾ ಸಮಿತಿಯ ಅಧ್ಯಕ್ಷ ಭಾಸ್ಕರ ಕೊಕ್ಕಡ ಪಾಲ್ಗೊಳ್ಳಲಿದ್ದಾರೆ.

ರಾತ್ರಿ ಕಾಯರ್ತಡ್ಕದ ತುಡರ್ ಕಲಾವಿದರಿಂದ ಅಂಚಾಯಿನೆಟ್ ಇಂಚಾಂಡ್ ಎಂಬ ನಾಟಕ ಪ್ರಸ್ತುತಗೊಳ್ಳಲಿದೆ ಎಂದು ಜಾತ್ರಾ ಸಮಿತಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here