Site icon Suddi Belthangady

ಧರ್ಮಸ್ಥಳ ಶ್ರೀ ಧ.ಮಂ.ಆಂ.ಮಾ.ಶಾಲೆಯಲ್ಲಿ ವಿದ್ಯಾರ್ಥಿಗಳ ಹೆತ್ತವರ ಸಮಾಲೋಚನಾ ಸಭೆ

ಧರ್ಮಸ್ಥಳ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಧರ್ಮಸ್ಥಳದಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಹೆತ್ತವರ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಉಜಿರೆಯ ದಂತ ವೈದ್ಯರಾಗಿರುವ ಡಾ.ದೀಪಾಲಿ ಎಸ್.ಡೊಂಗ್ರೆ ಆಗಮಿಸಿದ್ದರು.ಇರುವ ಕೆಲವು ದಿನಗಳಲ್ಲಿ ವಿದ್ಯಾರ್ಥಿಗಳ ಜೊತೆಗೆ ಹೆತ್ತವರ ಸಮಾಲೋಚನೆ ಹೇಗಿರಬೇಕು, ಅವರ ಚಲನವನಗಳ ಕುರಿತು ಹೇಗೆ ಗಮನಿಸಬೇಕು, ಮಾತುಕತೆ ಮುಕ್ತವಾಗಿ ಹೇಗಿರಬೇಕು ಎಂಬಿತ್ಯಾದಿ ವಿಚಾರಗಳನ್ನು ಹಲವಾರು ನೈಜ ಉದಾಹರಣೆಗಳ ಮುಖಾಂತರ ವಿದ್ಯಾರ್ಥಿಗಳ ಹೆತ್ತವರಿಗೆ ಅವರು ತಿಳಿಯ ಪಡಿಸಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಪರಿಮಳ ಎಂ.ವಿ.ಹತ್ತನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಮಟ್ಟ ಹಾಗೂ ಅವರ ಮುಂದಿನ ಓದಿನ ತಯಾರಿ ಹೇಗಿರಬೇಕು.ವಿದ್ಯಾರ್ಥಿಗಳ ಆರೋಗ್ಯದ ಕಡೆಗೆ ಹೆತ್ತವರ ಗಮನ ಇತ್ಯಾದಿ ವಿಚಾರಗಳನ್ನು ತಿಳಿಯ ಪಡಿಸಿದರು.ಸಹ ಶಿಕ್ಷಕಿ ಆಶಾ ಕಾರ್ಯಕ್ರಮವನ್ನು ನಡೆಸಿಕೊಟ್ಟು ವಂದಿಸಿದರು.ಕಾರ್ಯಕ್ರಮದಲ್ಲಿ ಪರಿಮಳ ಎಂ.ವಿ ಸ್ವಾಗತಿಸಿದರು.ಹತ್ತನೇ ತರಗತಿಯ ವಿದ್ಯಾರ್ಥಿ ಹೆತ್ತವರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.

Exit mobile version