ಉಜಿರೆ ರುಡ್ಸೆಟ್ ಸಂಸ್ಥೆಯಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ- ಆರಾಮ ವಲಯದಿಂದ ಹೊರ ಬಂದಾಗಲೇ ಯಶಸ್ಸು- ಕೆ.ಎನ್.ಜನಾರ್ಧನ್

0

ಉಜಿರೆ: ಕಠಿಣ ಪರಿಶ್ರಮವೇ ಯಶಸ್ಸಿನ ಗುಟ್ಟು, ಯಶಸ್ಸು ಎಂಬುದು ಸುಲಭವಾಗಿ ದಕ್ಕುವಂತದ್ದಲ್ಲ, ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಕೆಲಸ ಮಾಡಬೇಕು, ಇಚ್ಛಾಶಕ್ತಿ ಬೇಕು, ಜೊತೆಗೆ ಕೆಲಸವನ್ನು ಕಷ್ಟವೆನ್ನದೆ ಇಷ್ಟಪಟ್ಟು ಮಾಡಿ ಎಂದರು.

ಅನೇಕ ಯುವಕ-ಯುವತಿಯರು ರುಡ್ಸೆಟ್ ಸಂಸ್ಥೆಯಲ್ಲಿ ಕಲಿತು ಸಾದನೆ ಮಾಡಿದವರ ಸಾಲಿಗೆ ನೀವು ಬರಬೇಕು, ನಿಮ್ಮ ಬದುಕಿನ ಕಥೆಗಳೇ ನಾಳೆ ಸಾಧನೆಯ ಕಥೆಗಳಾಗಿ ಬದಲಾಗಬೇಕು ಎಂದು ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನ್ ರವರು ಅಭಿಪ್ರಾಯ ಪಟ್ಟರು.

ಅವರು ರುಡ್ಸೆಟ್ ಸಂಸ್ಥೆಯಲ್ಲಿ ನಡೆದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು. ಈ ಕಾರ್ಯಕ್ರಮದಲ್ಲಿ ರುಡ್ಸೆಟ್ ಸಂಸ್ಥೆಗಳ ಕಾರ್ಯನಿರ್ವಾಹಕ ನಿರ್ದೇಶಕ ಗಿರಿಧರ್ ಕಲ್ಲಾಪುರರವರು ಅದ್ಯಕ್ಷತೆ ವಹಿಸಿದ್ದರು.ಸಂಸ್ಥೆಯ ನಿರ್ದೆಶಕ ಎಮ್.ಸುರೇಶ್ ಉಪಸ್ಥಿತರಿದ್ದರು.

ಹಿರಿಯ ಉಪನ್ಯಾಸಕ ಅಬ್ರಹಾಂ ಜೇಮ್ಸ್ ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕಿ ಅನಸೂಯ ವಂದಿಸಿದರು.13 ದಿನಗಳ ಈ ಕಾರ್ಯಕ್ರಮದಲ್ಲಿ 31 ಅಭ್ಯರ್ಥಿಗಳು ಭಾಗವಹಿಸುವುದರ ಜೊತೆಗೆ 31 ವಿವಿಧ ಉದ್ಯಮಗಳನ್ನು ಪ್ರಾರಂಭಿಸುವ ಬಗ್ಗೆ ರೂಪು ರೇಷೆಗಳನ್ನು ತಯಾರಿಸಿದರು. ಕೆಲವು ಶಿಬಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here