ಕೊಕ್ಕಡ: ಅರಣ್ಯ ಇಲಾಖೆಯ ವಾಹನ ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ- ಮದ್ಯ ಸೇವಿಸಿ ವಾಹನ ಚಲಾಯಿಸಿರುವ ಶಂಕೆ

0

ಬೆಳ್ತಂಗಡಿ: ಕೊಕ್ಕಡ ಸಮೀಪದ ಪಟ್ಲಡ್ಕದಲ್ಲಿ ಉಪ್ಪಿನಂಗಡಿ ವಲಯ ಅರಣ್ಯ ಇಲಾಖೆಗೆ ಸಂಬಂಧಪಟ್ಟ ವಾಹನವು ಅರಣ್ಯ ಇಲಾಖೆಯ ಅಧಿಕಾರಿ ರಾಜೇಶ್ ಇವರು ಚಲಾಯಿಸುತ್ತಿದ್ದರು ಎಂದು ತಿಳಿದುಬಂದಿದೆ.

ರಾತ್ರಿ ಹೊತ್ತು ಮಧ್ಯ ಸೇವಿಸಿ ಇಲಾಖೆಯ ವಾಹನವನ್ನು ಚಲಾಯಿಸುತ್ತಿದ್ದ ಸಂದರ್ಭದಲ್ಲಿ ಚರಂಡಿಗೆ ಬಿದ್ದಿರುವ ಘಟನೆ ಫೆ.23ರಂದು ರಾತ್ರಿ ನಡೆದಿದೆ.

ಇದನ್ನು ತಿಳಿದ ಸಾರ್ವಜನಿಕರು ಸ್ಥಳಕ್ಕೆ ಧಾವಿಸಿ ವಾಹನವನ್ನು ಮೇಲೆ ಎತ್ತುವ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿದ್ದಾರೆ.

ಅಧಿಕಾರಿಗಳ ಫೋಟೋ ಮತ್ತು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು ಮಧ್ಯದ ಅಮಲಿನಲ್ಲಿ ಅಧಿಕಾರಿಗಳಿಗೆ ಎಲ್ಲಿ ಇದ್ದೇವೆ ಎಂಬುದೇ ಪರಿಜ್ಞಾನ ಇಲ್ಲದಂತಾಗಿದೆ ವಾಹನದಲ್ಲಿ ಇಬ್ಬರು ಇದ್ದರು ಎಂದು ತಿಳಿದುಬಂದಿದೆ.

ಯಾವುದೇ ರೀತಿಯ ಪ್ರಾಣಾಪಾಯ ಸಂಭವಿಸಿಲ್ಲ ವಾಹನವು ಸಂಪೂರ್ಣ ನಜ್ಜುಗುಜ್ಜಾಗಿದೆ.

LEAVE A REPLY

Please enter your comment!
Please enter your name here