Site icon Suddi Belthangady

ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಜಿರೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಉಜಿರೆ ಇವರ ನೇತೃತ್ವದಲ್ಲಿರೋಟರಿ ಕ್ಲಬ್ ಬೆಳ್ತಂಗಡಿ, ಸೇವಾಭಾರತಿ ಕನ್ಯಾಡಿ ॥ ಕೆ.ಎಂ.ಸಿ. ಬ್ಲಡ್ ಬ್ಯಾಂಕ್ ಮಂಗಳೂರು ಇವರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ಫೆ.25ರಂದು ಶಾರದಾ ಮಂಟಪದಲ್ಲಿ ನಡೆಯಿತು.

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ಆನುವಂಶಿಕ ಆಡಳಿತ ಮೋಕ್ತೆಸರ ಯು ಶರತ್ ಕೃಷ್ಣ ಪಡುವೆಟ್ನಾಯ ಉದ್ಘಾಟಿಸಿ ಶುಭ ಹಾರೈಸಿದರು.ಗೌಡರ ಯಾನೆ ಒಕ್ಕಲಿಗರ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ ಅಧ್ಯಕ್ಷತೆ ವಹಿಸಿದ್ದರು.

ಅತಿಥಿಗಳಾಗಿ ಗೌಡರ ಯಾನೆ ಒಕ್ಕಲಿಗರ ಸಮಿತಿ ಗೌರವ ಅಧ್ಯಕ್ಷ ಪ್ರಕಾಶ್ ಗೌಡ, ಅಪ್ರಮೇಯ, ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ ಕೆ. ವಿ., ಸೇವಾ ಭಾರತಿ ಕನ್ಯಾಡಿ ಅಧ್ಯಕ್ಷೆ ಸ್ವರ್ಣಗೌರಿ, ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ರೊ| ವಿದ್ಯಾಕುಮಾರ್ ಕಾಂಚೋಡು ಭಾಗವಹಿಸಿದ್ದರು.ಮಂಗಳೂರು ಕೆ ಎಂ ಸಿ ಬ್ಲಡ್ ಬ್ಯಾಂಕ್ ನ ಡಾ. ಶ್ರೇಯ ರಕ್ತದಾನದ ಬಗ್ಗೆ ಮಾಹಿತಿ ನೀಡಿದರು.

ಬೆಳ್ತಂಗಡಿ ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ, ಯುವ ವೇದಿಕೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ, ಉಜಿರೆ ಶ್ರೀ ಶಾರದಾ ಸೇವಾ ಟ್ರಸ್ಟ್ ಉಜಿರೆ, ಪ್ರಗತಿ ಮಹಿಳಾ ಮಂಡಲ ಉಜಿರೆ, ಶ್ರೀ ಉಮಾಮಹೇಶ್ವರ ಭಜನಾ ಮಂಡಳಿ, ಕಿರಿಯಾಡಿ ಶ್ರೀ ಲಕ್ಷ್ಮೀನಾರಾಯಣ ಭಜನಾ ಮಂಡಳಿ ಬದನಾಜೆಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ, ಗ್ರಾಮ ಸಮಿತಿ, ಬೆಳಾಲು,ಸರಸ್ವತಿ ಭಜನಾ ಮಂಡಳಿ, ವಿವೇಕಾನಂದ ನಗರ ಉಜಿರೆ ವಿಶ್ವಕರ್ಮ ಸಹಕಾರ ಬ್ಯಾಂಕ್ ಲಿ., ಉಜಿರೆ ಶಾಖೆ ಕೂಟ ಮಹಾಜಗತ್ತು, ಅಂಗ ಸಂಸ್ಥೆ, ಬೆಳ್ತಂಗಡಿ, ಪ್ರಗತಿ ಯುವಕ ಮಂಡಲ ಮಾಚಾರು, ವನದುರ್ಗಾ ಸ್ಪೋರ್ಟ್ಸ್ ಕ್ಲಬ್ ಬರೆಂಗಾಯ, ನಿಡ್ಲೆ ಭಕ್ತ ಕುಂಬಾರರ ಸಂಘ, ಗಾಂಧಿನಗರ, ಉಜಿರೆಭಾರತ್ ಆಟೋ ಕಾರ್ಸ್ ಪ್ರೈ. ಲಿ.. ಉಜಿರೆಮೂಲಾರ್ ಫ್ರೆಂಡ್ಸ್, ಮೂಲಾರ್ ಮೊದಲಾದ ಸಂಘ ಸಂಸ್ಥೆಯವರು ಸಹಕರಿಸಿದರು.

ಧರ್ಣಪ್ಪ ಗೌಡ ಧರಣಿ ಪ್ರಸ್ತಾವನೆಯೊಂದಿಗೆ ಸ್ವಾಗತಿಸಿ, ಶ್ರೀಧರ್ ಕೆ. ವಿ. ವಂದಿಸಿದರು, ಅಧ್ಯಾಪಕ ಲಕ್ಷ್ಮಣ ನಿರೂಪಿಸಿದರು.

Exit mobile version