ಸೇವಾಭಾರತಿ ಸಂಸ್ಥೆಗೆ ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂ.ಪ್ರೈ.ಲಿ ಉಪಕರಣಗಳ ಹಸ್ತಾಂತರ

0

ಉಜಿರೆ: ಕನ್ಯಾಡಿಯ ಸೇವಾಭಾರತಿ ಸಂಸ್ಥೆಗೆ ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನಿಂದ ಉಪಕರಣಗಳ ಹಸ್ತಾಂತರ ಕಾರ್ಯಕ್ರಮವು ಫೆ.23ರಂದು ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ಜರುಗಿತು.

ಸೇವಾಧಾಮದ ಸಂಸ್ಥಾಪಕ ಕೆ ವಿನಾಯಕ ರಾವ್ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮವನ್ನು ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನ ಸಿ ಇ ಒ ರಾಜೇಶ್ ಫಡ್ಕೆ ಉದ್ಘಾಟಿಸಿ, ಸೇವಾಭಾರತಿ ಸಂಸ್ಥೆಯು ನಡೆಸುತ್ತಿರುವ ಸೇವಾ ಕಾರ್ಯದ ಬಗ್ಗೆ ಪ್ರಶಂಸಿಸಿ ಅಭಿನಂದಿಸಿದರು.ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನ ಸಿ ಎಸ್ ಆರ್ ಯೋಜನೆಯಡಿ ನೀಡಿದಂತಹ ಉಪಕರಣಗಳನ್ನು ಸಾಂಕೇತಿಕವಾಗಿ ಸೇವಾಭಾರತಿ ಸಂಸ್ಥೆಗೆ ಹಸ್ತಾಂತರಿಸಿದರು.

ಬೆಂಗಳೂರಿನ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನ ಸಿ ಎಸ್ ಆರ್ ತಂಡದ ಸದಸ್ಯ ಗಣೇಶ್ ರಾಜ್ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.ಸೌತಡ್ಕ ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ನ ಅಧ್ಯಕ್ಷ ಕೆ ಕೃಷ್ಣ ಭಟ್ ಶುಭಾಶಂಸನೆಗೈದರು.ಸೇವಾಭಾರತಿ ಅಧ್ಯಕ್ಷೆ ಸ್ವರ್ಣಗೌರಿ ಅಧ್ಯಕ್ಷತೆ ವಹಿಸಿ ವಿಶೇಷ ಕೊಡುಗೆ ನೀಡಿದ  ದಾನಿ ಸಂಸ್ಥೆಗೆ ಕೃತಜ್ಞತೆ ಸಲ್ಲಿಸಿದರು.

ಸತತವಾಗಿ 4 ವರ್ಷಗಳಿಂದ ಸೇವಾಭಾರತಿ ಸಂಸ್ಥೆಗೆ ಬೆಂಬಲ,ಸಹಕಾರ  ನೀಡುತ್ತಿರುವ ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ತಮ್ಮ 2023-24ರ ಸಿ ಎಸ್ ಆರ್ ಯೋಜನೆಯಡಿ ಸಂಸ್ಥೆಗೆ ರಾಜ್ಯ ಮಟ್ಟದ ರಿಹ್ಯಾಬ್ ಮೇಳದಲ್ಲಿ ವೈದ್ಯಕೀಯ ತಪಾಸಣೆಗಾಗಿ ಸೇವಾನಿಕೇತನ ಕಚೇರಿಗೆ ಸ್ಪೀಕರ್, ಲ್ಯಾಪ್ ಟಾಪ್, ಕೇಂದ್ರಕ್ಕೆ ಫಿಸಿಯೋ ತೆರಪಿ ಸಲಕರಣೆಗಳಾದ ಶೋಲ್ಡರ್ ವೀಲ್ಸ್, ಸ್ಟ್ಯಾಂಡಿಂಗ್ ವೀಲ್ ಚೇರ್, ಸ್ಟಿಮ್ಯೂಲೇಷನ್ ಮಷೀನ್, ಬಿ ಪಿ ಮಾನ್ಯುವಲ್, ಸ್ಕೆತಾಸ್ಕೊಪ್, ಒಕ್ಸೋ ಮೀಟರ್  ಹಾಗೂ ದಿವ್ಯಾಂಗರಿಗೆ ಶೌಚಾಲಯ ಹಾಗೂ ರಾಂಪ್ ನಿರ್ಮಾಣಕ್ಕೆ  ಸಹಕಾರ ನೀಡಿದ್ದಾರೆ.ಕೆಮ್ ಟ್ರೆಂಡ್ ಕೆಮಿಕಲ್ಸ್ ಕಂಪನಿ ಪ್ರೈವೇಟ್ ಲಿಮಿಟೆಡ್ ನ ರಾಜೇಶ್ ಫಡ್ಕೆ ಹಾಗೂ ಗಣೇಶ್ ರಾಜ್ ಅವರಿಗೆ ಸಂಸ್ಥೆಯ ಪರವಾಗಿ ಸ್ಮರಣಿಕೆ ನೀಡಿ ಗೌರವಿಸಲಾಯಿತು.

ಕಾರ್ಯಕ್ರಮ ಸಂಯೋಜಕರಾದ  ಆಶ್ರಿತ್ ಸಿ ಪಿ ನಿರೂಪಿಸಿ, ಸೀನಿಯರ್ ಮ್ಯಾನೇಜರ್ ಚರಣ್ ಕುಮಾರ್ ಎಂ ಸ್ವಾಗತಿಸಿ, ಸೇವಾಭಾರತಿ ಕಾರ್ಯದರ್ಶಿ ಬಾಲಕೃಷ್ಣ ವಂದಿಸಿದರು.

LEAVE A REPLY

Please enter your comment!
Please enter your name here