Site icon Suddi Belthangady

ಮೊಗ್ರು: ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್ ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

ಮೊಗ್ರು: ವಿಜಯ ಕರ್ನಾಟಕ ಪತ್ರಿಕೆ ಹಮ್ಮಿಕೊಂಡ 2023ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲೆಯ ಸಾಧಕ ರೈತರಿಗೆ ಪುರಸ್ಕಾರ ನೀಡುವ ಆರನೇ ವರ್ಷದ ‘ವಿಕ ಸೂಪರ್ ಸ್ಟಾರ್ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ’ಯಿಂದ ಮೊಗ್ರು ಗ್ರಾಮದ ಕಡಮ್ಮಾಜಿ ಫಾರ್ಮ್‌ನ ದೇವಿಪ್ರಸಾದ್ ರವರು ಪುರಸ್ಕೃತಗೊಂಡಿದ್ದಾರೆ.

ಫೆ.25ರಂದು ಒಡಿಯೂರು ಸಂಸ್ಥಾನದ ಶ್ರೀ ಗುರುದೇವ ಜ್ಞಾನ ಮಂದಿರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸ್ವಾಮೀಜಿಯವರು ಪ್ರಶಸ್ತಿ ಪ್ರದಾನ ಮಾಡಿದರು.

ಈ ಸಂದರ್ಭದಲ್ಲಿ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಎಚ್. ಕೆಂಪೇಗೌಡ, ಯೂನಿಯನ್ ಬ್ಯಾಂಕ್‌ನ ಡೆಪ್ಯೂಟಿ ರಿಜೀನಲ್ ಹೆಡ್ ವಿಶುಕುಮಾರ್, ವಿಜಯ ಕರ್ನಾಟಕದ ಆರ್‌ಎಂಡಿ ವಿಭಾಗದ ಸೀನಿಯರ್ ಮ್ಯಾನೇಜರ್ ನಾರಾಯಣ್, ರೆಸ್ಪಾನ್ಸ್ ವಿಭಾಗದ ಚೀಫ್ ಮ್ಯಾನೇಜರ್ ಅರವಿಂದ ಎಂ., ಒಡಿಯೂರು ವಿವಿದೋದ್ದೇಶ ಸೌಹಾರ್ದ ಸಹಕಾರಿ ಸಂಘದ ಅಧ್ಯಕ್ಷ ಎ.ಸುರೇಶ್ ರೈ, ವಿಜಯ ಕರ್ನಾಟಕ ಪತ್ರಿಕೆಯ ಸ್ಥಾನೀಯ ಸಂಪಾದಕ ಬಿ.ರವೀಂದ್ರ ಶೆಟ್ಟಿ, ಪ್ರಧಾನ ವರದಿಗಾರ ಸುಧಾಕರ ಸುವರ್ಣ ಹಾಗೂ ಮಹಮ್ಮದ್ ಆರಿಫ್ ಪಡುಬಿದ್ರಿ ಉಪಸ್ಥಿತರಿದ್ದರು.

Exit mobile version