ರುಡ್‌ಸೆಟ್‌ ಸಂಸ್ಥೆಯಲ್ಲಿ ಎಸಿ, ಫ್ರಿಡ್ಜ್‌ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭ- ಪ್ರಯತ್ನವನ್ನು ಮಾಡುತ್ತಲೇ ಇದ್ದಾಗ ಓಳ್ಳೆಯ ಫಲಿತಾಂಶ ದೊರೆಯುತ್ತದೆ: ಸೋಮಶೇಖರ ಶೆಟ್ಟಿ

0

ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು.ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ ಕೂಡ ಅಳವಡಿಸಿಕೊಳ್ಳಿ, ಮಾದಕ ದ್ರವ್ಯಗಳಿಂದ ದೂರ ಇರಿ, ರುಡ್‌ಸೆಟ್‌ ಸಂಸ್ಥೆಯು ನಿಮಿಗೆ ವೃತ್ತಿ ಜೀವನದ ಜೊತೆಗೆ ಮೌಲ್ಯಾದಾರಿತ ಬದುಕನ್ನು ಕಲಿಸಿ ಕೊಟ್ಟಿದೆ, ಇದನ್ನು ಬದುಕಿನ ಉದ್ದಕ್ಕೂ ಅಳವಡಿಸಿ ಕೊಳ್ಳುವ ಪ್ರಯತ್ನ ಮಾಡಿ ಎಂದು ಎಸ್‌.ಡಿ.ಎಮ್‌ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಯಾದ ಸೋಮಶೇಖರ ಶೆಟ್ಟಿಯವರು ಅಭಿಪ್ರಾಯ ಪಟ್ಟರು.

ಅವರು ರುಡ್‌ಸೆಟ್‌ ಸಂಸ್ಥೆಯಲ್ಲಿ ನಡೆದ ಎಸಿ ಮತ್ತು ಫ್ರಿಡ್ಜ್‌ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದಲ್ಲಿ ರುಡ್‌ಸೆಟ್‌ ಸಂಸ್ಥೆಯ ನಿರ್ದೇಶಕರಾದ ಎಮ್.‌ಸುರೇಶ್‌ರವರು ಆದ್ಯಕ್ಷತೆ ವಹಿಸಿದ್ದರು, ಹಿರಿಯ ಉಪನ್ಯಾಸಕರಾದ ಅಬ್ರಹಾಂ ಜೇಮ್ಸ್‌ರವರು ಕಾರ್ಯಕ್ರಮ ನಿರೂಪಿಸಿ, ಹಿರಿಯ ಉಪನ್ಯಾಕರಾದ ಅನಸೂಯ ವಂದಿಸಿದರು.

30 ದಿನಗಳ ಈ ತರಬೇತಿ ಕಾರ್ಯಕ್ರಮದಲ್ಲಿ 25 ಅಭ್ಯರ್ಥಿಗಳು ಭಾಗವಹಿಸಿದರು.ಕೆಲವು ಶಿಭಿರಾರ್ಥಿಗಳು ತರಬೇತಿಯ ಅನಿಸಿಕೆಯನ್ನು ವ್ಯಕ್ತಪಡಿಸಿದರು.

LEAVE A REPLY

Please enter your comment!
Please enter your name here