ವೇಣೂರು ಹಂದೇವು ಸಂಜೀವ ದೇವಾಡಿಗರಿಗೆ ವಾತ್ಸಲ್ಯ ಮನೆ ಹಸ್ತಾಂತರ

0

ವೇಣೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿ ವ್ಯಾಪ್ತಿಯಲ್ಲಿ ಮಹಿಳಾ ಜ್ಞಾನ ವಿಕಾಸ ಕಾರ್ಯಕ್ರಮದಡಿ ವೇಣೂರು ಗ್ರಾಮದ ಹಂದೇವ್ ನಲ್ಲಿ ಸಂಜೀವ ದೇವಾಡಿಗ ಎಂಬವರಿಗೆ ಕಟ್ಟಿಸಿದ ವಾತ್ಸಲ್ಯ ಮನೆಯನ್ನು ಎಸ್ ಡಿ‌ ಎಮ್ ಕ್ಷೇಮವನ ಬೆಂಗಳೂರು ಇದರ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಶ್ರದ್ಧಾ ಅಮಿತ್ ಹಸ್ತಾಂತರಿಸಿದರು.

ಸಮಾಜದ ಕಟ್ಟಕಡೆಯ ನಿರ್ಗತಿಕ ಅಸಹಾಯಕ ಕುಟುಂಬಗಳಿಗೆ ಪರಮ ಪೂಜ್ಯ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ಜ್ಞಾನ ವಿಕಾಸ ಕಾರ್ಯಕ್ರಮದ ಅಧ್ಯಕ್ಷೆ ಹೇಮಾವತಿ ವಿ ಹೆಗ್ಗಡೆಯವರು ವಾತ್ಸಲ್ಯ ಮನೆ ನಿರ್ಮಾಣ ಮಾಡುವುದರೊಂದಿಗೆ ಮೂಲಭೂತ ಸೌಕರ್ಯಗಳನ್ನು ದೊರಕಿಸಿಕೊಡಲಾಗುತ್ತಿದೆ.

ಮನುಷ್ಯ ಬದುಕಿನುದ್ದಕ್ಕೂ ನೆಮ್ಮದಿಯಾಗಿ ಬದುಕಬೇಕು ಎಂದು ದುಡಿಮೆಯನ್ನು ಮಾಡು ವಾಸಕ್ಕೆ ಮನೆಯನ್ನು ನಿರ್ಮಿಸಬೇಕು ಎಂಬುದು ಎಲ್ಲರ ಆಶಯವಾಗಿರುತ್ತದೆ.ಕೆಲವೊಂದು ಕುಟುಂಬಗಳಿಗೆ ನಾನಾ ಕಾರಣಗಳಿಂದಾಗಿ ತನ್ನ ಆಶಯದ ಗುರಿಗಳನ್ನು ಸಾಧಿಸಲು ಅಸಹಾಯಕರಾಗಿ ತಮ್ಮ ಬದುಕು ಶೋಷನಿಯ ಸ್ಥಿತಿಯಲ್ಲಿರುತ್ತದೆ‌. ಅಂತವರನ್ನು ಗುರುತಿಸಿ ತನ್ನ ಜೀವನದ ಕೊನೆಯ ಗಟ್ಟದಲ್ಲಿರುವ ಕುಟುಂಬಗಳಿಗೆ ತೀರಾ ಅವಶ್ಯಕತೆಯುಳ್ಳ ಮೂಲಭೂತ ವ್ಯವಸ್ಥೆಗಳನ್ನು ಯೋಜನೆಯ ವತಿಯಿಂದ 17,873 ಕುಟುಂಬಗಳಿಗೆ ಮನೆ, ನೀರು, ಬೆಳಕು, ಔಷಧಿ, ಆಹಾರ, ಶೌಚಾಲಯ ಗಳನ್ನು ನಿರ್ಮಿಸಿಕೊಡುವುದರೊಂದಿಗೆ ಷೋಷಕರನ್ನು ನಿಯೋಜನೆ ಮಾಡಿ ರಾಜ್ಯಮಟ್ಟದಲ್ಲಿ ವ್ಯವಸ್ಥೆ ಕಲ್ಪಿಸಿರುವ ಕಾರ್ಯ ಅತ್ಯಂತ ಶ್ಲಾಘನೀಯವಾಗಿದೆ ಎಂದು ಪ್ರಶಂಸಿದರು.

ಯೋಜನೆಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಅನಿಲ್ ಕುಮಾರ್ ಎಸ್ ಎಸ್., ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್, ತಾಲೂಕು ಜನ ಜಾಗೃತಿ ವೇದಿಕೆಯ ಕೋಶಾಧಿಕಾರಿ ಗಿರೀಶ್, ಮಹಿಳಾ ಜ್ಞಾನ ವಿಕಾಸದ ನಿರ್ದೇಶಕ ವಿಠಲ ಪೂಜಾರಿ, ಯೋಜನಾಧಿಕಾರಿಗಳಾದ ಸಂಗೀತ ಮತ್ತು ಅಮೃತಾ, ಸಮನ್ವಯಾಧಿಕಾರಿ ಹರಿಣಿ, ವಲಯ ಮೇಲ್ವಿಚಾರಕಿ ಶಾಲಿನಿ, ಸೇವಾ ಪ್ರತಿನಿಧಿ ಜಯಂತಿ ಮೊದಲಾದವರು ಉಪಸ್ಥಿತರಿದ್ದರು.

ಯೋಜನಾಧಿಕಾರಿ ದಯಾನಂದ ಸ್ವಾಗತಿಸಿ ವಂದಿಸಿದರು.

LEAVE A REPLY

Please enter your comment!
Please enter your name here