ಧರ್ಮಸ್ಥಳ: ವಿದ್ಯುತ್ ಶಾಕ್‌ನಿಂದ ಯುವಕ ಸಾವು

0

ಧರ್ಮಸ್ಥಳ: ವಿದ್ಯುತ್ ಶಾಕ್ ಹೊಡೆದು ಕಾರ್ಮಿಕ ಯುವಕನೋರ್ವ ಧರ್ಮಸ್ಥಳದಲ್ಲಿ ಮೃತಪಟ್ಟಿರುವ ಘಟನೆ ಫೆ.29ರಂದು ನಡೆದಿದೆ.

ಉತ್ತರ ಕರ್ನಾಟಕದ ಸಲೀಂ(36ವ) ಮೃತಪಟ್ಟವನು.

ಧರ್ಮಸ್ಥಳ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ಕಟ್ಟಡವೊಂದರ ಕಾಂಕ್ರೀಟ್ ಕಾಮಗಾರಿ ಸಂದರ್ಭ ಕಾಂಕ್ರೀಟ್ ವೈಬ್ರೇಟರ್‌ ಮಷೀನ್‌ನ ವಯರ್‌ನಿಂದ ವಿದ್ಯುತ್ ಪ್ರವಹಿಸಿ ಸಲೀಂ ಗಂಭೀರ ಗಾಯಗೊಂಡಿದ್ದು, ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾನೆ.

ಮರಣೋತ್ತರ ಪರೀಕ್ಷೆ ಬಳಿಕ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here