Site icon Suddi Belthangady

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಮಹಿಳಾ ಶಾಖೆ ಸ್ಥಳಾಂತರ

ಬೆಳ್ತಂಗಡಿ: ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯ ಮಹಿಳಾ ಶಾಖೆ ಸ್ಥಳಾಂತರಿತ ಹವಾನಿಯಂತ್ರಿತ ಶಾಖೆಯ ಉದ್ಘಾಟನಾ ಸಮಾರಂಭವು ಮಾ.01ರಂದು ಬೆಳ್ತಂಗಡಿ ಸಂತೆಕಟ್ಟೆ ಪ್ರಜ್ವಲ್ ಕಾಂಪ್ಲೆಕ್ಸ್ ನಲ್ಲಿ ನಡೆಯಿತು.

ಶಾಖಾ ಕಛೇರಿಯನ್ನು ಬೆಳ್ತಂಗಡಿ ತಾಲೂಕು ಆರೋಗ್ಯ ಕೇಂದ್ರದ ಕಿವಿ, ಗಂಟಲು ಮತ್ತು ಮೂಗು ತಜ್ಞೆ ಡಾ.ತಾರಕೇಶ್ವರಿ ವಿ.ಶೆಟ್ಟಿ ಶಾಖಾ ಕಛೇರಿಯನ್ನು ಉದ್ಘಾಟಿಸಿದರು.

ವಿಜಯ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಸ್.ಜಯರಾಮ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು.

ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆನುವಂಶಿಕ ಆಡಳಿತ ಮೊಕ್ತೇಸರರು ಶರತ್ ಕೃಷ್ಣ ಪಡ್ವೆಟ್ಯಾಯ ದೀಪ ಪ್ರಜ್ವಲಿಸಿದರು.ವಿಧಾನ ಪರಿಷತ್ ಸದಸ್ಯ ಕೆ.ಪ್ರತಾಪ್ ಸಿಂಹ ನಾಯಕ್ ಭದ್ರತಾ ಕೊಠಡಿ ಉದ್ಘಾಟಿಸಿ, ಗುರುವಾಯನಕೆರೆ ಎಕ್ಸೆಲ್ ಪಿಯು ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಬಿ ಗಣಕ ಯಂತ್ರ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಉಪಾಧ್ಯಕ್ಷ ಎಂ.ಜಿ.ಶೆಟ್ಟಿ, ನಿರ್ದೇಶಕರಾದ ಸೀತಾರಾಮ ಶೆಟ್ಟಿ, ಬಾಲಕೃಷ್ಣ ಪೂಂಜಾ ಹೆಚ್, ಜಯಂತ್ ಶೆಟ್ಟಿ, ಬಿ.ನಾರಾಯಣ ಶೆಟ್ಟಿ, ಅಂಬಾ ಬಿ.ಆಳ್ವ, ಪುರಂದರ ಶೆಟ್ಟಿ, ಜಯರಾಮ ಭಂಡಾರಿ ಎಂ, ಮಂಜುನಾಥ ರೈ, ಸಾರಿಕಾ ಶೆಟ್ಟಿ, ಬೆಳ್ತಂಗಡಿ ಪ್ರಭಾರ ಶಾಖಾ ಪ್ರಬಂಧಕರು ಅಖಿಲಾ ಆರ್.ಶೆಟ್ಟಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಯ್ ಶೆಟ್ಟಿ, ಕಟ್ಟಡದ ಮಾಲಕಿ ಜಯಶ್ರೀ ಪಿ.ನಾಯಕ್, ಬಂಟರ ಸಂಘದ ಅಧ್ಯಕ್ಷ ಜಯರಾಮ ಶೆಟ್ಟಿ ಮುಂಡಾಡಿಗುತ್ತು ಉಪಸ್ಥಿತರಿದ್ದರು.

ನಿರ್ದೇಶಕರಾದ ರಘುರಾಮ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.

Exit mobile version