Site icon Suddi Belthangady

ಪಶುಸಂಗೋಪನಾ ಇಲಾಖೆಯ ವೈದ್ಯಾಧಿಕಾರಿ ಜಯಕೀರ್ತಿ ಜೈನ್ ಸೇವಾ ನಿವೃತ್ತಿ

ಬೆಳ್ತಂಗಡಿ: ಪಶುಸಂಗೋಪನಾ ಇಲಾಖೆಯಲ್ಲಿ ಪಶುವೈದ್ಯಕೀಯರಾಗಿ ಸುದೀರ್ಘ 36 ವರ್ಷ 7ತಿಂಗಳ ಸೇವೆ ಸಲ್ಲಿಸಿದ ಜಯಕೀರ್ತಿ ಜೈನ್ ರವರು ಫೆ.29ರಂದು ಸೇವಾ ನಿವೃತ್ತಿ ಹೊಂದಿದ್ದಾರೆ.

ಇವರಿಗೆ ಪಶುವೈದ್ಯಕೀಯ, ಸಾಮಾಜಿಕ, ಆರೋಗ್ಯ ಸಹಕಾರಿ ರಂಗ ಇನ್ನಿತರ ಸೇವೆಗಳಲ್ಲಿ ಸಾಧಿಸಿದ ಸಾಧನೆಗಳನ್ನು ಗುರುತಿಸಿ ರಾಜ್ಯ ಸರಕಾರದ ಅತ್ಯುನ್ನತ ಪ್ರಶಸ್ತಿಯಾದ ಸರ್ವೋತ್ತಮ ಸೇವಾ ಪ್ರಶಸ್ತಿ ಹಾಗೂ ಸಾಮಾಜಿಕ ಸೇವಾ ಕಾರ್ಯಗಳಿಗಾಗಿ ಗೌರವ ಡಾಕ್ಟರೇಟ್ ಪ್ರಶಸ್ತಿ ಲಭಿಸಿದೆ.

ಪ್ರಸ್ತುತ ಇವರು ಸರಕಾರಿ ನೌಕರರ ಸಂಘದ ರಾಜ್ಯ ಕಾರ್ಯದರ್ಶಿಯಾಗಿ, ಬೆಳ್ತಂಗಡಿ ತಾಲೂಕು ಅಧ್ಯಕ್ಷರಾಗಿ, ಬೆಳ್ತಂಗಡಿ ಸರಕಾರಿ ನೌಕರರ ಸಹಕಾರಿ ಸಂಘದ ಅಧ್ಯಕ್ಷರಾಗಿ, ಪಶುವೈದ್ಯಕೀಯ ಪರಿವೀಕ್ಷಕರ ಜಿಲ್ಲಾ ಸಂಘದ ಅಧ್ಯಕ್ಷರಾಗಿ, ಮಹಾವೀರ ಕೋ. ಓ. ಸೊಸೈಟಿಯ ಜಿಲ್ಲಾ ನಿರ್ದೇಶಕರಾಗಿ, ವೇಣೂರು ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

Exit mobile version