ಧರ್ಮಸ್ಥಳ: ಶ್ರೀ ಮಂ.ಸ್ವಾ.ಅ.ಹಿ.ಪ್ರಾ ಶಾಲೆಯಲ್ಲಿ ಲಿಂಗ ತಾರತಮ್ಯ- ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧದ ಬಗ್ಗೆ ಕಾರ್ಯಾಗಾರ

0

ಧರ್ಮಸ್ಥಳ: ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳಲ್ಲಿ ಲಿoಗ ತಾರತಮ್ಯ ಮತ್ತು ಜೀವನದಲ್ಲಿ ಒತ್ತಡ ನಿರ್ವಹಣೆ, ಆರೋಗ್ಯಕರ ಸಂಬಂಧ ಎಂಬ ವಿಷಯ ದ ಬಗ್ಗೆ ಕಾರ್ಯಾಗಾರವನ್ನು ಅಮೃತವರ್ಷಿಣಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು.

ಸೈoಟ್ ಅಲೋಶಿಯಸ್ ಕಾಲೇಜು ಮಂಗಳೂರು ಇಲ್ಲಿಯ ವಿದ್ಯಾ ರ್ಥಿನಿಯರಾದ ಬ್ಲೆಸಿ ಮರಿಯ, ಕೀರ್ತನ ಮತ್ತು ರಾಯಲಿನ್ ಸಿಕ್ವೇರಾ ಆಗಮಿಸಿ ಈ ವಿಷಯದ ಬಗ್ಗೆ ಅತ್ಯುತ್ತಮ ರೀತಿಯಲ್ಲಿ ವೀಡಿಯೋ ಮೂಲಕ ವಿವರಿಸಿದರು.

ಕಾರ್ಯಕ್ರಮದಲ್ಲಿ ಮುಖ್ಯ ಶಿಕ್ಷಕರು ವಿದ್ಯಾರ್ಥಿನಿಯರನ್ನು ಗೌರವಿಸಿದರು.

ಶೋಭಾ ನಿರೂಪಿಸಿದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು.ಶ್ರೀಜಾ ಸ್ವಾಗತಿಸಿ ವಂದನಾರ್ಪಣೆಗೈದರು.

LEAVE A REPLY

Please enter your comment!
Please enter your name here