ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಪಿಂಕ್ ಮ್ಯಾರಥಾನ್

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಮಹಿಳಾ ಜೆಸಿ ಹಾಗೂ ಜೂನಿಯರ್ ಜೆಸಿ ವಿಭಾಗದ ನೇತೃತ್ವದಲ್ಲಿ ಲಯನ್ಸ್ ಕ್ಲಬ್ ಬೆಳ್ತoಗಡಿ, ಬೆಳ್ತಂಗಡಿ ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, NCC ಘಟಕ ಎಸ್.ಡಿ.ಎಂ ಕಾಲೇಜು ಉಜಿರೆ, ಮಹಿಳಾ ವೃಂದ ಬೆಳ್ತಂಗಡಿ, ತಾಲೂಕು ಅರೋಗ್ಯ ಅಧಿಕಾರಿ ಕಚೇರಿ ಬೆಳ್ತಂಗಡಿ, ಪಂಚಶ್ರೀ ಭಜನಾ ಮಂಡಳಿ ಬಳಂಜ, ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿ ಲಾಯಿಲ ಮತ್ತು ಲಿಯೋ ಕ್ಲಬ್ ಬೆಳ್ತಂಗಡಿ ಇದರ ಜಂಟಿ ಸಹಯೋಗದಲ್ಲಿ ಪಿಂಕ್ ಮ್ಯಾರಥಾನ್ “ನಾರಿ ಇನ್ ಪಿಂಕ್ ಸಾರಿ” ಕ್ಯಾನ್ಸರ್ ಜಾಗೃತಿ ಜಾಥಾ ಮಾ.1ರಂದು ಬೆಳ್ತಂಗಡಿ ಸಂತೆಕಟ್ಟೆ ಅಯ್ಯಪ್ಪ ಗುಡಿಯಿಂದ ಜೆಸಿ ಭವನದ ವರೆಗೆ ಆಯೋಜಿಸಲಾಯಿತು.

ಪಿಂಕ್ ಮ್ಯಾರಥಾನ್ ಗೆ ಜಾಥಾಕ್ಕೆ ತಹಶೀಲ್ದಾರ್ ಪೃಥ್ವಿ ಸಾನಿಕಮ್ ಮತ್ತು ಬೆಳ್ತಂಗಡಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಪ್ರಿಯಾ ಆಗ್ನೇಸ್ ಚಾಲನೆಯನ್ನು ನೀಡಿ ಉತ್ತಮ ಕಾರ್ಯಕ್ರಮ ಆಯೋಜಿಸಿದ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಹಾಗೂ ಸಹಕರಿಸಿದ ಎಲ್ಲಾ ಸಂಘ ಸಂಸ್ಥೆಗಳಿಗೆ ಅಭಿನಂದಿಸಿದರು.

ಸಂಜೆ ಜೆಸಿ ಭವನದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಕ್ಯಾನ್ಸರ್ ಬಗ್ಗೆ ಡಾ.ವಿದ್ಯಾವತಿ, ನಿವೃತ್ತ ಸರಕಾರಿ ತಜ್ಞ ವೈದ್ಯರು, ಬೆಳ್ತಂಗಡಿ ಇವರು ಜಾಗೃತಿಯನ್ನು ನೀಡದರು ಮತ್ತು ಸಂವಾದ ನಡೆಸಿದರು.ಜೆಸಿಐ ಬೆಳ್ತಂಗಡಿಯ ಮಹಿಳಾ ವಿಭಾಗದ ಸಂಯೋಜಕಿ ಜೆಸಿ ಶ್ರುತಿ ರಂಜಿತ್ ಅಧ್ಯಕ್ಷತೆಯನ್ನು ವಹಿಸಿದ್ದರು.

ಕಾರ್ಯಕ್ರಮದಲ್ಲಿ ಗೌರವ ಉಪಸ್ಥಿತರಾಗಿ ಲ.ಉಮೇಶ್ ಶೆಟ್ಟಿ, ಅಧ್ಯಕ್ಷರು ಲಯನ್ಸ್ ಕ್ಲಬ್ ಬೆಳ್ತಂಗಡಿ, ಶಂಕರ್ ರಾವ್, ವಲಯ ಉಪಾಧ್ಯಕ್ಷರು, ವಲಯ 15, ಜೆಸಿಐ ಭಾರತ, ಶಾಂತ ಬಂಗೇರ, ಗೌರವಾಧ್ಯಕ್ಷರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಸವಿತಾ ಜಯದೇವ, ಅಧ್ಯಕ್ಷರು ತಾಲೂಕು ಮಹಿಳಾ ಮಂಡಲಗಳ ಒಕ್ಕೂಟ ಬೆಳ್ತಂಗಡಿ, ಆಶಾ ಸತೀಶ್, ಅಧ್ಯಕ್ಷರು ಮಹಿಳಾ ವೃಂದ ಬೆಳ್ತಂಗಡಿ, ಪುಷ್ಪ ಗಿರೀಶ್, ಅಧ್ಯಕ್ಷರು ಪಂಚಶ್ರೀ ಭಜನಾ ಮಂಡಳಿ ಬಳಂಜ, ಉಷಾ, ಸದಸ್ಯರು ಶ್ರೀ ಬಲಮುರಿ ಗಣಪತಿ ಭಜನಾ ಮಂಡಳಿ ಲಾಯಿಲ ಇವರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಜೆಸಿಐ ಬೆಳ್ತಂಗಡಿ ಮಂಜುಶ್ರೀ ಘಟಕದ ಅಧ್ಯಕ್ಷ ರಂಜಿತ್ ಎಚ್ ಡಿ. ಬಳಂಜ ಸ್ವಾಗತಿಸಿದರು. ವೇದಿಕೆ ಆಹ್ವಾನವನ್ನು ಘಟಕದ ಉಪಾಧ್ಯಕ್ಷೆ ಹೇಮಾವತಿ ಕೆ, ಜೆಸಿ ವಾಣಿಯನ್ನು ಉಪಾಧ್ಯಕ್ಷ ಜೆಸಿ ಆಶಾ ಪ್ರಶಾಂತ್, ಸಂಪನ್ಮೂಲ ವ್ಯಕ್ತಿಗಳ ಪರಿಚಯವನ್ನು ಜೆಸಿ ಸುಭಾಷಿಣಿ, ಸನ್ಮಾನ ಪತ್ರವನ್ನು ಕಾರ್ಯಕ್ರಮದ ಸಂಯೋಜಕಿ ಜೆಸಿ ಮಧುರ ರಾಘವ್ ವಾಚಿಸಿದರು.

ಘಟಕದ ಕಾರ್ಯದರ್ಶಿಗ ಅನುದೀಪ್ ಜೈನ್ ವಂದಿಸಿದರು.ಕಾರ್ಯಕ್ರಮದಲ್ಲಿ ಜೆಸಿಐ ಬೆಳ್ತಂಗಡಿ ಯ ಪೂರ್ವ ಅಧ್ಯಕ್ಷರುಗಳು, ಮಹಿಳಾ ವಿಭಾಗದ ಪೂರ್ವ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಎಲ್ಲಾ ಸಹಯೋಗ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರುಗಳು, ಸಾರ್ವಜನಿಕರು ಭಾಗವಹಿಸಿದರು.

LEAVE A REPLY

Please enter your comment!
Please enter your name here