Site icon Suddi Belthangady

ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿಯ ಪುನರ್ ಪ್ರತಿಷ್ಠಾ ಮಹೋತ್ಸವದ ಸಮಾರೋಪ ಸಮಾರಂಭ- ಸುದ್ದಿ ಯೂಟ್ಯೂಬ್ ಚಾನೆಲ್ ನಲ್ಲಿ ನೇರಪ್ರಸಾರ

ಗುರುವಾಯನಕೆರೆ: ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಗುರುವಾಯನಕೆರೆ ಇದರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಸಮಾರೋಪ ಸಮಾರಂಭ ಮಾ.2ರಂದು ನಡೆಯಿತು.

ಪ್ರಸಿದ್ದ ವಾಗ್ಮಿ, ಲೇಖಕರು ಶ್ರೀಕಾಂತ್ ಶೆಟ್ಟಿ ಉಪನ್ಯಾಸ ನೀಡಿದರು.ವೇದಿಕೆಯಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಅಧ್ಯಕ್ಷ ರಂಜಿತ್ ಹೆಚ್.ಡಿ, ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ, ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಆಡಳಿತ ಮೊಕ್ತೇಸರ ವಿಶ್ವೇಶ್ ಕಿಣಿ, ಉಪಾಧ್ಯಕ್ಷರುಗಳಾದ ಮೋಹನ್ ಶಿವಾಜಿನಗರ, ವೆಂಕಟರಮಣ ರತ್ನಗಿರಿ ಹಾಗೂ ಜೊತೆ ಕಾರ್ಯದರ್ಶಿ ಶರಣ್ ಕುಲಾಲ್ ಉಪಸ್ಥಿತರಿದ್ದರು.

ಪರ್ವ ದೈವರಾಧನೆಯ ಮಹಾ ಸಮ್ಮೇಳನದ ಪ್ರಧಾನ‌ ಸಂಚಾಲಕ ಸಂಪತ್ ಬಿ.ಸುವರ್ಣ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.ಹೆಚ್.ಕೆ.ನಯನಾಡು ಕಾರ್ಯಕ್ರಮ ನಿರೂಪಿಸಿದರು.ಕಾರ್ಯಕ್ರಮದಲ್ಲಿ ವಿವಿಧ ಸಮಿತಿಗಳ ಸಂಚಾಲಕರನ್ನು ಗೌರವಿಸಲಾಯಿತು.

Exit mobile version