Site icon Suddi Belthangady

ಪುದುವೆಟ್ಟು ರಾತ್ರಿ ಹೋಗುತ್ತಿದ್ದ ಆಟೋ ರಿಕ್ಷಾ ಮೇಲೆ ಕಾಡು ಕೋಣ ದಾಳಿ- ಆಟೋದಲ್ಲಿದ್ದ ಬಾಲಕ ದಿಲ್ಸನ್ ತಲೆಗೆ ಗಾಯ- ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲು

ಪುದುವೆಟ್ಟು: ಗ್ರಾಮದ ದಡಪಿತ್ತಿಲು ವ್ಯಾಪ್ತಿಯ ಧರ್ಮಸ್ಥಳ-ಮುಂಡಾಜೆ ಮೀಸಲು ಅರಣ್ಯ ಪ್ರದೇಶದಲ್ಲಿ ಮಾರ್ಚ್ 2 ರಂದು ರಾತ್ರಿ ಸುಮಾರು ಗಂಟೆ 8:30 ಗಂಟೆಗೆ ಧರ್ಮಸ್ಥಳದಿಂದ ಬೊಮ್ಮನಾರು ಕಡೆ ಹೋಗುತ್ತಿದ್ದ ಆಟೋ ರಿಕ್ಷಾ ಚಾಲಕರಾದ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದ ವಡೆಕ್ಕೆಲ್, ಬೊಲ್ಮನಾರು ನಿವಾಸಿ ಡೆನ್ನಿಸ್ (42) ಮತ್ತು ಮಗ ದಿಲ್ಸನ್(15) ಎಂಬವರು ಹೋಗುವಾಗ ಆಟೋ ರಿಕ್ಷಾದ ಮೇಲೆ ಕಾಡುಕೋಣವೊಂದು ದಾಳಿ ಮಾಡಿ ಪಲ್ಟಿ ಮಾಡಿ ಜಖಂ ಮಾಡಿದೆ.

ಈ ಘಟನೆ ವೇಳೆ ಆಟೋದಲ್ಲಿದ್ದ ದಿಲ್ಸನ್(15) ಎಂಬುವರಿಗೆ ತಲೆಗೆ ಗಾಯವಾಗಿದ್ದು ಕೂಡಲೇ ಸ್ಥಳೀಯರ ಸಹಕಾರದೊಂದಿಗೆ ಉಜಿರೆ ಎಸ್.ಡಿ.ಎಮ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಿದ್ದು ಪ್ರಾಣಾಪಾಯದಿಂದ ಪಾರಾಗಿದ್ದು ಈ ಬಗ್ಗೆ ಬೆಳ್ತಂಗಡಿ ಅರಣ್ಯ ಇಲಾಖೆಯಲ್ಲಿ ಪ್ರಕರಣ ದಾಖಲಾಗಿದೆ.

Exit mobile version