ಮಾವಿನಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿ

0

ಬೆಳ್ತಂಗಡಿ : ಪುತ್ತೂರಿನಿಂದ ಗೇರುಕಟ್ಟೆಗೆ ಪ್ರಯಾಣಿಸುತ್ತಿದ್ದ ವೇಳೆ ಮಾವಿನ ಕಟ್ಟೆ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಸರಿ ಸುಮಾರು 15 ಅಡಿ ಆಳ ಇರುವ ಹೋಂಡಕ್ಕೆ ಬಿದ್ದಿರುವ ಘಟನೆ ಮಾರ್ಚ್ 3ರಂದು ರಾತ್ರಿ ನಡೆದಿದೆ.

ವಾಹನಲ್ಲಿ 5 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.

ವಾಹನ ಸವಾರ ಮತ್ತು ಸಹ ಪ್ರಯಾಣಿಕರಿಗೆ ಗಾಯಗಳಾಗಿದ್ದು ತಕ್ಷಣ ಸ್ಥಳೀಯ ಆಸ್ಪತ್ರೆಗೆ ರವಾನಿಸಲಾಗಿದೆ.

ವಾಹನವನ್ನು ಮೇಲೆ ಎತ್ತುವ ಕಾರ್ಯಾಚರಣೆ ನಡೆಯುತ್ತಿದ್ದು ಸ್ಥಳಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಜಮಾಯಿಸಿದ್ದಾರೆ.

LEAVE A REPLY

Please enter your comment!
Please enter your name here