Site icon Suddi Belthangady

ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ನಿವೃತ್ತಿಗೊಂಡ ಡಾ.ಕೆ.ಜಯಕೀರ್ತಿ ಜೈನ್ ರಿಗೆ ಸನ್ಮಾನ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಶುವೈದ್ಯಕೀಯ ಪರೀಕ್ಷಕರ ಸಂಘದಿಂದ ಜಿಲ್ಲಾ ಸಂಘದ ಅಧ್ಯಕ್ಷರಾಗಿ 30ವರ್ಷ ಸೇವೆ ಸಲ್ಲಿಸಿದ ಡಾ.ಕೆ.ಜಯಕೀರ್ತಿ ಜೈನ್ ಅವರನ್ನು ಪಶು ಸಂಗೋಪನೆ ಇಲಾಖೆಯ ಜಿಲ್ಲಾ ಉಪನಿರ್ದೇಶಕ ಡಾ.ಅರುಣ್ ಕುಮಾರ್ ಶೆಟ್ಟಿ ಯವರು ಸಂಘದ ಪದಾಧಿಕಾರಿಗಳ ಸಮ್ಮುಖದಲ್ಲಿ ಮಂಗಳೂರಿನಲ್ಲಿ ಸನ್ಮಾನಿಸಿದರು.

ಸಮಾರಂಭದ ಅಧ್ಯಕ್ಷ ತೆ ಯನ್ನು ಕೃಷ್ಣಮೂರ್ತಿ ಜಿ ವಹಿಸಿದ್ದರು.

ಅತಿಥಿಗಳಾಗಿ ಪುಷ್ಪರಾಜ್ ಶೆಟ್ಟಿ, ಪ್ರಶಾಂತ್ ಕುಮಾರ್, ಶ್ರೀಮಂದರ ಜೈನ್, ಮೋಹನ್ ದಾಸ್, ಡಾ.ವಸಂತ ಶೆಟ್ಟಿ ಉಪಸಸ್ಥಿತರಿದ್ದರು.

Exit mobile version