Site icon Suddi Belthangady

ಮಿತ್ತಬಾಗಿಲು ಮಸೀದಿ ಬಳಿ ಹೊಡೆದಾಟ- ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

ಮಿತ್ತಬಾಗಿಲು: ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಸ್ಥಳೀಯ ನಿವಾಸಿ ಅಶ್ರಫ್ ಪಿ ಎಂಬವರ ಮೇಲೆ ಗುಂಪೊಂದು ಹಲ್ಲೆ‌ ನಡೆಸಿರುವುದಾಗಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ.

ಅವರು ಲೈಟಿಂಗ್ ಕೆಲಸ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಆರೋಪಿಗಳಾದ ಸಿನಾನ್ ಮತ್ತು ಅಬ್ದುಲ್ ರಹಿಮಾನ್ ಎಂಬವರುಗಳು ಕಿಟ್ ಹಂಚುವ ವಿಚಾರವಾಗಿ ಜಗಳ ತೆಗೆದು ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಹಾಕಿದ್ದಾರೆ.ಅಲ್ಲದೆ ಕರೀಂ ಮತ್ತು ಚೆರಿಯಮೋನು ಎಂಬವರು ಹಲ್ಲೆ ನಡೆಸಿ ರಕ್ತಗಾಯ ಮಾಡಿರುತ್ತಾರೆ‌.ಎಂದು ಬೆಳ್ತಂಗಡಿ ಪೊಲೀಸರಿಗೆ ನೀಡಿರುವ ದೂರಿನಲ್ಲಿ‌ ಅಶ್ರಫ್ ಆರೋಪಿಸಿದ್ದಾರೆ.
ಬೆಳ್ತಂಗಡಿ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇದೇ ಘಟನೆಯ ಮುಂದುವರಿದ ಭಾಗವಾಗಿ ಸ್ಥಳೀಯ ನಿವಾಸಿ ಜೈನಾಬ್ ಎಂಬವರು ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿದ್ದು ಆರೋಪಿಗಳಾದ ತಾಲಿ ಉಮ್ಮರ್, ಸಫಾನ್, ಸಿನಾನ್, ಆಸಿಫ್‌, ಹಕ್ಕೀಂ, ಟಿ.ಎ ಮಹಮ್ಮದ್ ಎಂಬವರು ಮನೆಗೆ ಅಕ್ರಮವಾಗಿ ಪ್ರವೇಶಿಸಿ ಜೈನಾಬ್ ಅವರಿಗೆ ಹಾಗೂ ಅವರ ಅಣ್ಣ ಅಬ್ದುಲ್ ರಹಿಮಾನ್ ಎಂಬವರ ಮೇಲೆ ಹಲ್ಲೆ ನಡೆಸಿ ಜೀವಬೆದರಿಕೆ ಹಾಕಿರುವುದಾಗಿ ಆರೋಪಿಸಲಾಗಿದೆ.

ಹಲ್ಲೆಗೆ ಒಳಗಾದ ಮಹಿಳೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ. ಘಟನೆಯ ಬಗ್ಗೆ ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಎರಡೂ ಪ್ರಕರಣಗಳನ್ನು ದಾಖಲಿಸಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Exit mobile version