Site icon Suddi Belthangady

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಂಗಾಡಿ ಪ್ರೌಢ ಶಾಲಾ 10ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿ

ಇಂದಬೆಟ್ಟು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಬಂಗಾಡಿ ಪ್ರೌಢ ಶಾಲೆಯ 10ನೇ ತರಗತಿ ಮಕ್ಕಳಿಗೆ ವಿಶೇಷ ತರಗತಿಯನ್ನು ನಡೆಸಲಾಯಿತು.

ಇದರ ಸಮಾರೋಪ ಸಮಾರಂಭವನ್ನು ಬಂಗಾಡಿ ಪ್ರೌಢ ಶಾಲೆಯಲ್ಲಿ ನಡೆಸಲಾಯಿತು.

ಸಭೆಯನ್ನು ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕ ಮಹಾಬಲ ಕುಲಾಲ್ ರವರು ದೀಪ ಬೆಳಗಿಸಿ ಮಕ್ಕಳ ಮುಂದಿನ ವಿದ್ಯಾಭ್ಯಾಸದ ಭವಿಷ್ಯಕ್ಕೆ SSLCಯ ಅಂಕವೇ ಪ್ರಾಮುಖ್ಯವಾಗಿದ್ದು, ಮಕ್ಕಳಿಗೆ ವಿಶೇಷ ತರಗತಿಯನ್ನು ಹಮ್ಮಿಕೊಂಡಿದ್ದು ಮಕ್ಕಳು ಇದರ ಪ್ರಯೋಜನವನ್ನು ಪಡೆದಿರುತ್ತೀರಿ, ಉತ್ತಮ ಅಂಕಗಳೊಂದಿಗೆ ತೇರ್ಗಡೆಯಾಗುವಂತೆ ತಿಳಿಸಿದರು.

ಶಾಲೆಯ ಮುಕ್ಯೋಪಾಧ್ಯಾಯಿನಿ ಚಂದ್ರಕಲಾ ರವರು ತಮ್ಮ ಶಾಲೆಯ ಮಕ್ಕಳಿಗೆ ಈ ಅವಕಾಶ ನೀಡಿದಕ್ಕಾಗಿ ಧನ್ಯವಾದ ತಿಳಿಸಿದರು.

ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಶಾಲಾಬಿವೃದ್ಧಿ ಸಮಿತಿಯ ಅಧ್ಯಕ್ಷ ಉಮೇಶ್ ರವರು ಗ್ರಾಮಭಿವ್ರದ್ಧಿ ಯೋಜನೆಯ ಮೂಲಕ ಕ್ಷೇತ್ರದಿಂದ ಶಾಲೆಗೆ ಉತ್ತಮ ಸಹಕಾರ ದೊರೆತಿದ್ದು ಎಲ್ಲಾ ಮಕ್ಕಳು ಉತ್ತಮ ಅಂಕಗಳಿಸುವಂತೆ ತಿಳಿಸಿದರು.

ತರಬೇತಿ ಪಡೆದ ವಿದ್ಯಾರ್ಥಿ ನಿಶಿತಾ ರವರು ಅನಿಸಿಕೆ ವ್ಯಕ್ತಪಡಿಸಿದರು.ಕಾರ್ಯಕ್ರಮದಲ್ಲಿ ವಲಯ ಮೇಲ್ವಿಚಾರಕಿ ಉಷಾ, ವಿಶೇಷ ತರಗತಿ ಶಿಕ್ಷಕಿ ಕವಿತಾ, ಜ್ಞಾನ ವಿಕಾಸ ಸಮನ್ವಯಧಿಕಾರಿ ಮಧುರಾ ವಸಂತ್ ಸೇವಾಪ್ರತಿನಿಧಿ ಶೈಲ ಉಪಸ್ಥಿತರಿದ್ದರು.

Exit mobile version